25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

ಲಾಯಿಲ: ಕಪುಚಿನ್ ಕೃಷಿಕ ಸೇವಾ ಕೇಂದ್ರದ ಅಂಗಸಂಸ್ಥೆಯಾದ ದಯಾ ವಿಶೇಷ ಶಾಲೆಯಲ್ಲಿ ಎ.22 ರಂದು ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಂ. ಫಾ. ವಿನೋದ್ ಮಸ್ಕರೇನಸ್, ವಕೀಲರು ಹಾಗೂ ನಿರ್ದೇಶಕರು, ದಯಾ ವಿಶೇಷ ಶಾಲೆ ಇವರು ವಹಿಸಿ, ಉಧ್ಘಾಟಕರಾದ ಬೆಳ್ತಂಗಡಿ ಜೆ.ಎಮ್.ಎಫ್.ಸಿ. ನ್ಯಾಯಾಲಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ.ಹೆಚ್ ಭಾರತದ ಸಂವಿಧಾನ ಪುಸ್ತಕಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಎಲೋಶಿಯಸ್ ಎಸ್. ಲೋಬೋ, ಅಧ್ಯಕ್ಷರು, ಹಿರಿಯ ವಕೀಲರ ಸಂಘ, ಬೆಳ್ತಂಗಡಿ. , ವಿನಯಕುಮಾರ್ ಎಂ, ಜೊತೆ ಕಾರ್ಯದರ್ಶಿ ವಕೀಲರ ಸಂಘ, ಬೆಳ್ತಂಗಡಿ, ಶ್ರೀಮತಿ. ದಿವ್ಯಾ ಟಿ.ವಿ, ಮುಖ್ಯಶಿಕ್ಷಕಿ ದಯಾ ವಿಶೇಷ ಶಾಲೆ, ಪೋಷಕ ಪ್ರತಿನಿಧಿಯಾಗಿ ಶ್ರೀಮತಿ ಗೀತಾರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಶಾಲೆಯ ವಿಶೇಷ ಚೇತನ ಮಕ್ಕಳು, ಅವರ ಪೋಷಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಶ್ರೀಮತಿ ಐಶ್ವರ್ಯರವರು ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು. ಶಿಕ್ಷಕ .ರಮೇಶ್ ರವರು ಸರ್ವರಿಗೂ ವಂದಿಸಿದರು.

Related posts

ಉಜಿರೆ: ವ್ಯಾಪಾರ ಪರವಾನಿಗೆ ನವೀಕರಣ ಗೊಂದಲ ಬಗ್ಗೆ ಪಂಚಾಯತ್ ಅಧಿಕಾರಿಗಳಿಗೆ ಮನವಿ

Suddi Udaya

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

Suddi Udaya

ನೆರಿಯ: ಮನೆಗೆ ಬೆಂಕಿ ತಗುಲಿ ಹಾನಿಯಾದ ಕುಟುಂಬಕ್ಕೆ ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಧನಸಹಾಯ ಹಸ್ತಾಂತರ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ನಾರಾವಿ ವಲಯದ ಭಜನಾ ಪರಿಷತ್ತಿನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!