25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ:ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯ ಚಿನ್ನೋತ್ಸವ’ ಸಂಭ್ರಮ: ವಿವಿಧ ಬಗೆಯ ವೆರೈಟಿ ಚಿನ್ನಾಭರಣಗಳಿಗೆ ಮುಳಿಯ ಸಂಸ್ಥೆ ಹೆಸರುವಾಸಿಯಾಗಿದೆ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಮೇ 20 ರ ವರಗೆ ಮುಳಿಯ ಚಿನ್ನೋತ್ಸವ ನಡೆಯಲಿದ್ದು ಇದರ ಉದ್ಘಾಟನೆಯನ್ನು ಚಲನಚಿತ್ರ ನಟಿ ಸಿಂಚನ ಪಿ ರಾವ್ ನೆರವೇರಿಸಿ ಮಾತನಾಡಿ ನಂಬಿಕೆ ಮತ್ತು ಪರಿಶುದ್ದತೆಗೆ ಹೆಸರುವಾಸಿಯಾದ ಮುಳಿಯ ನಮ್ಮೆಲ್ಲರ ಅಚ್ಚುಮೆಚ್ಚಿನ ಸಂಸ್ಥೆಯಾಗಿದೆ. ಗ್ರಾಹಕರಿಗೆ ಉತ್ತಮವಾದ ಸೇವೆ ಇಲ್ಲಿ ದೊರೆಯುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಮಹಿಳಾ ಮಂಡಳಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸವಿತಾ ಜಯದೇವ್ ವಹಿಸಿ ಮಾತನಾಡಿ ನಮ್ಮ ಕುಟುಂಬದ ಎಲ್ಲರೂ ಮುಳಿಯದ ಗ್ರಾಹಕರು.ವೈರಿಟಿಗಳ ಚಿನ್ನಾಭರಣಗಳಿಗೆ ಮುಳಿಯ ಹೆಸರುವಾಸಿಯಾಗಿದೆ. ಮುಳಿಯದಲ್ಲಿ ನಗುಮೊಗದ ಸೇವೆ ಗ್ರಾಹಕರಿಗೆ ಸಿಗುತ್ತಿದೆ ಎಂದರು.

ಮಾರ್ಕೆಟಿಂಗ್ ಕನ್ಸಲ್ಟೆಂಟ್ ವೇಣುಗೋಪಾಲ್ ಶರ್ಮ ಮಾತನಾಡಿ ಮುಳಿಯದಲ್ಲಿ ಪ್ರತಿವರ್ಷ 2 ಸಲ ಚಿನ್ನೋತ್ಸವ ಮಾಡುತ್ತೇವೆ. ಊರಿನ‌ ಗ್ರಾಹಕರ ಅಭಿರುಚಿಗೆ ತಕ್ಕಂತೆ ಚಿನ್ನಾಭರಣಗಳನ್ನು ಡಿಸೈನ್ ಮಾಡಿ ನೀಡುತ್ತೇವೆ. ಅಂತರಾಷ್ಟ್ರೀಯ ಮಟ್ಟದ ಡಿಸೈನ್ ನಮ್ಮಲ್ಲಿದೆ. 80 ವರ್ಷದ ಹಿಂದೆ ಚಿನ್ನಕ್ಕೆ 2 ರೂ ಇತ್ತು. ಇವತ್ತು ಹತ್ತಿರತ್ತಿರ 7 ಸಾವಿರಕ್ಕೆ ಬಂದು ನಿಂತಿದೆ. ಚಿನ್ನಕ್ಕೆ ಇನ್ವೆಸ್ಟ್ಮೆಂಟ್ ಮಾಡಬಹುದು. ಗ್ರಾಹಕರ ಸಹಕಾರ ಹಾಗೂ ಪ್ರೀತಿಯಿಂದ ಬೆಳ್ತಂಗಡಿಯಲ್ಲಿ ಮುಳಿಯ ನಂಬರ್ ಒನ್ ಸಂಸ್ಥೆಯಾಗಿ ಬೆಳೆದಿದೆ ಎಂದರು.

ಬೆಳ್ತಂಗಡಿ ಮುಳಿಯದ ಲೋಹಿತ್ ಕುಮಾರ್ ಎಲ್ಲರನ್ನು ಸ್ವಾಗತಿಸಿದರು.

ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ, ಇತ್ಯಾದಿ ನಿಮ್ಮ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್‌ನ ಚಿನ್ನೋತ್ಸವದಲ್ಲಿ ಭಾಗವಹಿಸಿ ನಿಮ್ಮ ನೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿ ಮಾಡಬಹುದಾಗಿದೆ.ಈ ಬಾರಿಯ ಚಿನ್ನೋತ್ಸವದಲ್ಲಿ ಅಮೂಲ್ಯ ಆಭರಣಗಳು ಹಾಗೂ ಕಿಸ್ನ ಮಾದರಿಯ ಜ್ಯುವೆಲ್ಸ್ ಇರಲಿದೆ.  ಅಲ್ಲದೇ ಗ್ರಾಹಕರಿಗೆ ಖರೀದಿಯ  ಮೇಲೆ ಬಹುಮಾನಗಳು ಇರಲಿದೆ. ವಿವಿಧ ವಿನ್ಯಾಸಗಳ ಆಭರಣಗಳು ವಿಶೇಷ ಬೆಲೆಯಲ್ಲಿ ಲಭ್ಯವಾಗಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

ಮುಳಿಯ ಸಂಸ್ಥೆಯ ದಿನೇಶ್ ಅವರು ಧನ್ಯವಾದ ಸಲ್ಲಿಸಿದರು.

Related posts

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya
error: Content is protected !!