25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

ಉಜಿರೆ : ಹುಬ್ಬಳ್ಳಿ ಕೆಬಿವಿ ಕಾಲೇಜಿನಲ್ಲಿ ನಡೆದ ನೇಹಾ ಹೀರೆಮಠ ಹತ್ಯೆ ಖಂಡಿಸಿ ಎ.22 ರಂದು ಉಜಿರೆ ಸರ್ಕಲ್ ನಲ್ಲಿ ಎಬಿವಿಪಿ ಬೆಳ್ತಂಗಡಿ ಘಟಕದ ವತಿಯಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ವಿಭಾಗ ಕೇಲ್ ಪ್ರಮುಖ್ ಸುವಿತ್ ಶೆಟ್ಟಿ ಮಾತನಾಡಿ ನೇಹಾ ಹೀರೆಮಠ ಪ್ರೇಮವನ್ನು ಒಪ್ಪಿಕೊಳ್ಳದ ಕಾರಣ ಆಕೆಯನ್ನು ಫಯಾಜ್ ಎಂಬಾತ ಹತ್ಯೆ ಮಾಡುತ್ತಾನೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿದೆ. ಉಡುಪಿಯ ಪ್ರಕರಣಗಳಿರಬಹುದು, ಕಡಬದಲ್ಲಿ ಮೂವರು ಹೆಣ್ಣು ಮಕ್ಕಳ ಮೇಲೆ ಒಬ್ಬ ಜಿಹಾದಿ ಆಸಿಡ್ ದಾಳಿ ಮಾಡಿದ ಪ್ರಕರಣ ಇರಬಹುದು, ಹಾಗೇ ಮೊನ್ನೆ ಕೆವಿಬಿ ಕಾಲೇಜ್ ನಲ್ಲಿ ನೇಹಾಳ ಹತ್ಯೆ ಇರಬಹುದು, ರಾಜ್ಯ ಸರ್ಕಾರ ಏನು ಮಾಡುತ್ತಿದೆ?

ರಾಜ್ಯ ಸರ್ಕಾರದ ಪ್ರತಿನಿಧಿ ಗೃಹ ಸಚಿವರು ಒಂದು ಸ್ಟೇಟ್ ಮೆಂಟ್ ನ್ನು ನೀಡುತ್ತಾರೆ, ಅದೇನು ದೊಡ್ಡ ವಿಷಯವಲ್ಲ, ಯಾವಾಗಲೂ ಆಗುತ್ತದೆ ಎಂಬುದಾಗಿ, ವಿದ್ಯಾರ್ಥಿಗಳ ಪ್ರಾಣ ಎಂದರೆ ಇವರಿಗೆ ಲೆಕ್ಕಕ್ಕೆ ಇಲ್ವಾ? ಸರ್ಕಾರದ ಓಲೈಕೆ ರಾಜಕಾರಣದಿಂದ ಇಂತಹ ಘಟನೆಗಳು ಹೆಚ್ಚಾಗುತ್ತಿದೆ.

ಶುಕ್ರವಾರ ವಿದ್ಯಾರ್ಥಿ ಪರಿಷತ್ ನ ಕಾರ್ಕಳ ಘಟಕದ ಕಾರ್ಯಕರ್ತರು ದೊಂದಿ ಮೆರವಣಿಗೆ ಮೂಲಕ ಹೋರಾಟ ಮಾಡುತ್ತಾರೆ ಹೋರಾಟ ಮಾಡಿದಂತಹ ಹೋರಾಟಗಾರರನ್ನು ಅಲ್ಲಿನ ಪೊಲೀಸರು ತಡೆದು ಅವರ ಮೇಲೆ ಎಫ್ ಐಆರ್ ಹಾಕುವಂತಹ ಕೆಲಸ ಮಾಡಿದ್ದಾರೆ. ತಕ್ಷಣ ಕಾರ್ಯಕರ್ತರ ಮೇಲೆ ಹಾಕಿದಂತಹ ಎಫ್ ಐ ಆರ್ ನ್ನು ತೆಗೆಯಬೇಕು, ಇಲ್ಲವಾದರೆ ಮುಂದಿನ ದಿವಸಗಳಲ್ಲಿ ಆಗುವಂತಹ ಪರಿಣಾಮಕ್ಕೆ ನೇರವಾಗಿ ರಾಜ್ಯ ಸರ್ಕಾರ ಹೊಣೆ.

ಎಬಿವಿಪಿಯ ಹೋರಾಟವನ್ನು ಸೂಕ್ತ ರೀತಿಯಿಂದ ಗಮನಿಸಿ, ಕಾರ್ಯಕರ್ತ ಮೇಲೆ ಹಾಕಿದ ಎಫ್ಐಆರ್ ತೆಗೆಸಿ, ನೇಹಾಳನ್ನು ಹತ್ಯೆ ಮಾಡಿದ ಫಯಾಜ್ ನ್ನು ಎನ್ಕೌಂಟರ್ ಮಾಡಿ ಮುಂದೆ ಈ ರೀತಿಯ ಘಟನೆಗಳು ಆಗದ ರೀತಿಯಲ್ಲಿ ನೋಡಿಕೊಳ್ಳಿ ಎಂದು ಹೇಳಿದರು.

ವಿದ್ಯಾರ್ಥಿ ಪರಿಷತ್ ನ ಕಾರ್ಯಕರ್ತರಾದ ರಕ್ಷಿತ್, ಸೆಬಾಸ್ಟಿನ್, ಮಲ್ಲಿಕಾರ್ಜುನ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ ನ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್ ಸಿಸಿ. ಎನ್‌ಎಸ್‌ಎಸ್. ರೇಂಜರ್ಸ್ ರೋವರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಮರುಮೌಲ್ಯಮಾಪನ ಕಾಯರ್ತಡ್ಕ ಪ್ರೌಢಶಾಲೆ 100% ಫಲಿತಾಂಶ

Suddi Udaya

ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ

Suddi Udaya

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಕಾರ್ಯಾಗಾರ

Suddi Udaya
error: Content is protected !!