ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

ಬೆಳ್ತಂಗಡಿ ಲಾಯಿಲ ಸುಬ್ರಹ್ಮಣ್ಯನಗರ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಎ.29 ರಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ರವರು ಶ್ರೀ ಚಂದ್ರಮೌಳೀಶ್ವರ ಪೂಜಾದಿಗಳನ್ನು ನೆರವೇರಿಸಿ ಆಶೀರ್ವದಿಸಲಿದ್ದಾರೆ.
ಎ.29 ರಂದು ಸಾಯಂಕಾಲ ಗಂಟೆ 6ಕ್ಕೆ ಶ್ರೀ ಜಗದ್ಗುರುಗಳ ಆಗಮನ, ಸ್ವಾಗತ, ಧೂಳಿಪಾದ ಪೂಜೆ, ಫಲಸಮರ್ಪಣೆ, ಆಶೀರ್ವಚನ
ರಾತ್ರಿ ಶ್ರೀ ಚಂದ್ರಮೌಳೀಶ್ವರ ಪೂಜೆ ಪಾದಪೂಜಾ ಸೇವೆಗಳು ನಡೆಯಲಿದೆ.

ನಂತರ ಎ.30 ರಂದು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಆಗಮಿಸಿ ಚಂಡಿಕಾ ಹೋಮದ
ಪೂರ್ಣಾಹುತಿಯನ್ನು ಸಂಪನ್ನಗೊಳಿಸಿ ಶ್ರೀ ದುರ್ಗಾಪರಮೇಶ್ವರೀ ದೇವರ ಪೂಜೆಯನ್ನು ಮಾಡಿ ಆಶೀರ್ವಚನಗಳನ್ನು ನೀಡಲಿದ್ದಾರೆ.
ಪ್ರಾತಃ 6-೦೦ ಗಂಟೆಗೆ ಶ್ರೀ ಚಂಡಿಕಾ ಹೋಮಾರಂಭ, 9 ಕ್ಕೆ ಶ್ರೀ ಜಗದ್ಗುರುಗಳ ಆಗಮನ, ಸ್ವಾಗತ, ಮೆರವಣಿಗೆ, ಚಂಡಿಕಾ ಹೋಮದ ಪೂರ್ಣಾಹುತಿ, ಶ್ರೀ ದುರ್ಗಾಪರಮೇಶ್ವರೀ ದೇವರಿಗೆ ಶ್ರೀ ಜಗದ್ಗುತುಗಳಿಂದ ಪ್ರಸನ್ನಪೂಜೆ, ಕ್ಷೇತ್ರದರ್ಶನ, ಧೂಳಿ ಪಾದಪೂಜೆ, ಫಲಸಮರ್ಪಣೆ, ಆಶೀರ್ವಚನ, ಪಾದಪೂಜಾ-ಭಿಕ್ಷಾವಂದನೆ ಸೇವೆಗಳು, ಸಮಸ್ತ ಭಕ್ತಜನರಿಗೆ
ಶ್ರೀ ಜಗದ್ಗುತುಗಳಿಂದ ಫಲಮಂತ್ರಾಕ್ಷತೆ, ನಡೆಯಲಿದೆ.

Related posts

ಸಿರಿ ಸಂಸ್ಥೆಯ ಎಂ.ಡಿ. ಕೆ.ಎನ್ ಜನಾರ್ಧನರವರಿಗೆ ‘ಪ್ರತಿಷ್ಠಿತ ಮಹಾತ್ಮಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ’: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

Suddi Udaya

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

Suddi Udaya

ನಾರಾವಿ ವಲಯ ಮಟ್ಟದ ಬಾಲಕ–ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಶಿಗ್ಗಾಂವಿ ಉಪ ಚುನಾವಣೆ ಉಸ್ತುವಾರಿಯಾಗಿ ಕೆ. ಹರೀಶ್ ಕುಮಾರ್ ನೇಮಕ

Suddi Udaya
error: Content is protected !!