23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

ಬೆಳ್ತಂಗಡಿ ಲಾಯಿಲ ಸುಬ್ರಹ್ಮಣ್ಯನಗರ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಎ.29 ರಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ರವರು ಶ್ರೀ ಚಂದ್ರಮೌಳೀಶ್ವರ ಪೂಜಾದಿಗಳನ್ನು ನೆರವೇರಿಸಿ ಆಶೀರ್ವದಿಸಲಿದ್ದಾರೆ.
ಎ.29 ರಂದು ಸಾಯಂಕಾಲ ಗಂಟೆ 6ಕ್ಕೆ ಶ್ರೀ ಜಗದ್ಗುರುಗಳ ಆಗಮನ, ಸ್ವಾಗತ, ಧೂಳಿಪಾದ ಪೂಜೆ, ಫಲಸಮರ್ಪಣೆ, ಆಶೀರ್ವಚನ
ರಾತ್ರಿ ಶ್ರೀ ಚಂದ್ರಮೌಳೀಶ್ವರ ಪೂಜೆ ಪಾದಪೂಜಾ ಸೇವೆಗಳು ನಡೆಯಲಿದೆ.

ನಂತರ ಎ.30 ರಂದು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಆಗಮಿಸಿ ಚಂಡಿಕಾ ಹೋಮದ
ಪೂರ್ಣಾಹುತಿಯನ್ನು ಸಂಪನ್ನಗೊಳಿಸಿ ಶ್ರೀ ದುರ್ಗಾಪರಮೇಶ್ವರೀ ದೇವರ ಪೂಜೆಯನ್ನು ಮಾಡಿ ಆಶೀರ್ವಚನಗಳನ್ನು ನೀಡಲಿದ್ದಾರೆ.
ಪ್ರಾತಃ 6-೦೦ ಗಂಟೆಗೆ ಶ್ರೀ ಚಂಡಿಕಾ ಹೋಮಾರಂಭ, 9 ಕ್ಕೆ ಶ್ರೀ ಜಗದ್ಗುರುಗಳ ಆಗಮನ, ಸ್ವಾಗತ, ಮೆರವಣಿಗೆ, ಚಂಡಿಕಾ ಹೋಮದ ಪೂರ್ಣಾಹುತಿ, ಶ್ರೀ ದುರ್ಗಾಪರಮೇಶ್ವರೀ ದೇವರಿಗೆ ಶ್ರೀ ಜಗದ್ಗುತುಗಳಿಂದ ಪ್ರಸನ್ನಪೂಜೆ, ಕ್ಷೇತ್ರದರ್ಶನ, ಧೂಳಿ ಪಾದಪೂಜೆ, ಫಲಸಮರ್ಪಣೆ, ಆಶೀರ್ವಚನ, ಪಾದಪೂಜಾ-ಭಿಕ್ಷಾವಂದನೆ ಸೇವೆಗಳು, ಸಮಸ್ತ ಭಕ್ತಜನರಿಗೆ
ಶ್ರೀ ಜಗದ್ಗುತುಗಳಿಂದ ಫಲಮಂತ್ರಾಕ್ಷತೆ, ನಡೆಯಲಿದೆ.

Related posts

ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ

Suddi Udaya

ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಇಂದಬೆಟ್ಟು ಗ್ರಾಮ ಪಂಚಾಯಿತ್ ನಿಕಟಪೂರ್ವ ಅಧ್ಯಕ್ಷ ಆನಂದ್ ಅಡಿಲು ಸ್ಪಷ್ಟನೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಉಜಿರೆಯಲ್ಲಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಶುಭಾರಂಭ

Suddi Udaya

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಗುರುನಮನ ಕಾರ್ಯಕ್ರಮ

Suddi Udaya
error: Content is protected !!