September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

ಬೆಳ್ತಂಗಡಿ: ದಮ್ಮಾಂ, ಕರ್ನಾಟಕ ಸಮಸ್ತ ಇಸ್ಲಾಮಿಕ್ ಸೆಂಟರ್ ಎಸ್. ಐ. ಸಿ ದಮ್ಮಾಂ ಕರ್ನಾಟಕದ ಅಡಿಯಲ್ಲಿ ನೂತನವಾಗಿ ಪ್ರಾರಂಭಗೊಂಡ ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ 2024-2025 ನೇ ಸಾಲಿನ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ ಎ 21 ಸಮಾರಂಭದ ರೂಪದಲ್ಲಿ ನಡೆಯಿತು.


ಸಂಜೆ ನಡೆದ ಕಾರ್ಯಕ್ರಮದಲ್ಲಿ ಪುಟಾಣಿ ಶೋ, ಶಿಕ್ಷಣ ರಕ್ಷಕ ಸಭೆ, ಪ್ರಾರ್ಥನಾ ಸಂಗಮ ಇತ್ಯಾದಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಎಸ್ ಕೆ ಐ ಎಂ ವಿ ಬಿ ಅಂಗೀಕೃತ ಸಿಲೆಬಸ್‌ ಇಲ್ಲಿ ಅಳವಡಿಸಲಾಗಿದೆ ಮತ್ತು ಉತ್ತಮ ಶಿಕ್ಷಕರ ನೇತೃತ್ವದಲ್ಲಿ ಅಧ್ಯಾಯನ ನಡೆಸಲಾಗುತ್ತಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಝಾಕ್ ಮಂಡೆಕೋಲು ವಹಿಸಿದರು . ಕಾರ್ಯಕ್ರಮದ ಉದ್ಘಾಟನೆಯನ್ನು ಸವಾದ್ ಫೈಝಿ ಉಸ್ತಾದರು ಮಾಡಿದರು ಮನ್ಸೂರ್ ಹುದವಿ ಪ್ರಾಸ್ತಾವಿಕ ಭಾಷಣ ಮಾಡಿದರು ವಿಷಯ ಮಂಡನೆಯನ್ನು ಸಿನಾನ್ ಹುದವಿ ಅಲ್ ಇರ್ಶಾದಿ ಕುಪ್ಪೆಟ್ಟಿ ನಡೆಸಿದರು .


ಅಧ್ಯಯನ ಶಿಬಿರದಲ್ಲಿ ಮುಖ್ಯ ಅಧ್ಯಾಪಕರಾದ ಅಬ್ದುಲ್ ರಶೀದ್ ಫೈಝಿ ಪೋಳ್ಯ. ವಿದ್ಯಾರ್ಥಿಗಳಿಗೆ ತರಗತಿ ಕ್ಲಾಸ್ ಉದ್ಘಾಟಿಸಿ ಮಾತನಾಡಿದರು .
ಕಾರ್ಯಕ್ರಮದಲ್ಲಿ ಶರೀಫ್ ಮೇನಾಳ ಸ್ವಾಗತಿಸಿ ಕಾರ್ಯಕ್ರಮದ ಸವಾದ್ ನೇರಲಕಟ್ಟೆ ಧನ್ಯವಾದ ಹೇಳಿದರು . ಕಾರ್ಯಕ್ರಮದಲ್ಲಿ ನೌಶಾದ್ ಪೋಳ್ಯ ಸುನೀರ್ ಕೂರ್ನಡ್ಕ ಬಶೀರ್ ಅಝ್ಹರಿ ಚಾರ್ಮಾಡಿ ಮುಂತಾದ ಗಣ್ಯರು ಉಪಸ್ಥಿತರಿದ್ದರು
ಸೌದಿ ವಿಸಿಟಿಂಗ್ ಬರುವ ಫ್ಯಾಮಿಲಿಗಳಿಗೆ ಅಡ್ಮಿಶನ್ ಕೊಡಲಾಗುವುದು. ವಾರದ ಮೂರು ದಿನ ತರಗತಿ ನಡೆಸಲಾಗುತ್ತಿದೆ

Related posts

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya

ರೋಟರಿ ಆನ್ಸ್ ಕ್ಲಬ್ ನ ಅಧ್ಯಕ್ಷರಾಗಿ ರಾಜಶ್ರೀ ಡಿ. ರಾವ್, ಕಾರ್ಯದರ್ಶಿಯಾಗಿ ಅರ್ಪಣಾ ವಾಟ್ವೆ ಆಯ್ಕೆ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!