25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

ಲಾಯಿಲ: ಕಪುಚಿನ್ ಕೃಷಿಕ ಸೇವಾ ಕೇಂದ್ರದ ಅಂಗಸಂಸ್ಥೆಯಾದ ದಯಾ ವಿಶೇಷ ಶಾಲೆಯಲ್ಲಿ ಎ.22 ರಂದು ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಂ. ಫಾ. ವಿನೋದ್ ಮಸ್ಕರೇನಸ್, ವಕೀಲರು ಹಾಗೂ ನಿರ್ದೇಶಕರು, ದಯಾ ವಿಶೇಷ ಶಾಲೆ ಇವರು ವಹಿಸಿ, ಉಧ್ಘಾಟಕರಾದ ಬೆಳ್ತಂಗಡಿ ಜೆ.ಎಮ್.ಎಫ್.ಸಿ. ನ್ಯಾಯಾಲಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ.ಹೆಚ್ ಭಾರತದ ಸಂವಿಧಾನ ಪುಸ್ತಕಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಎಲೋಶಿಯಸ್ ಎಸ್. ಲೋಬೋ, ಅಧ್ಯಕ್ಷರು, ಹಿರಿಯ ವಕೀಲರ ಸಂಘ, ಬೆಳ್ತಂಗಡಿ. , ವಿನಯಕುಮಾರ್ ಎಂ, ಜೊತೆ ಕಾರ್ಯದರ್ಶಿ ವಕೀಲರ ಸಂಘ, ಬೆಳ್ತಂಗಡಿ, ಶ್ರೀಮತಿ. ದಿವ್ಯಾ ಟಿ.ವಿ, ಮುಖ್ಯಶಿಕ್ಷಕಿ ದಯಾ ವಿಶೇಷ ಶಾಲೆ, ಪೋಷಕ ಪ್ರತಿನಿಧಿಯಾಗಿ ಶ್ರೀಮತಿ ಗೀತಾರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಶಾಲೆಯ ವಿಶೇಷ ಚೇತನ ಮಕ್ಕಳು, ಅವರ ಪೋಷಕರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಶ್ರೀಮತಿ ಐಶ್ವರ್ಯರವರು ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು. ಶಿಕ್ಷಕ .ರಮೇಶ್ ರವರು ಸರ್ವರಿಗೂ ವಂದಿಸಿದರು.

Related posts

ನೆರಿಯ: ಸಂಜೀವ ಗೌಡ ನಿಧನ

Suddi Udaya

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ವಿಚಾರಣೆಗೆ ಬರಲು ಪೊಲೀಸರು ನೋಟಿಸು ನೀಡಿಲ್ಲ: ಶಾಸಕರಿಗೆ ಗೃಹ ಬಂಧನದಂತೆ ಪೊಲೀಸರು ಮಾಡಿದ್ದಾರೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya
error: Content is protected !!