July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ  ಪಡುವೆಟ್ನಾಯರ  ನೇತೃತ್ವ,  ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ ಉಜಿರೆ ವಲಯದ ವತಿಯಿಂದ  ವಲಯಾಧ್ಯಕ್ಷ ಗಿರಿರಾಜ ಬಾರಿತ್ತಾಯ ಅವರಿಂದ ಸಮಾಜ ಹಾಗು ಲೋಕ ಕಲ್ಯಾಣಾರ್ಥ ಎ 23 ರಂದು ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ   ವೇದಮೂರ್ತಿ  ದುರ್ಗಾಪ್ರಸಾದ್ ಕೆರ್ಮುಣ್ಣಾಯ ಅವರ ಪೌರೋಹಿತ್ಯದಲ್ಲಿ “ಶ್ರೀ ವಿಷ್ಣು ಯಾಗ “ನಡೆಯಿತು. 

ವಿಪ್ರ ಬಾಂಧವರು ಹಾಗು ಮಹಿಳಾ ಸದಸ್ಯೆಯರು ಸಾಮೂಹಿಕ  ಶ್ರೀ ವಿಷ್ಣು ಸಹಸ್ರನಾಮ ಪಠಣ ದಲ್ಲಿ ಭಾಗವಹಿಸಿದ್ದರು. ವಸಂತ ವೇದ ಪಾಠ ಶಿಬಿರದ  ವಟುಗಳು ಶ್ರೀ ವಿಷ್ಣು ಸಹಸ್ರ ನಾಮಾವಳಿ ಪಠಣಗೈದರು .  ಮದ್ಯಾಹ್ನ ಯಾಗದ ಪೂರ್ಣಾಹುತಿ ನಡೆದು ಪ್ರಸಾದ ವಿತರಣೆ  ಹಾಗೂ ಸಂತರ್ಪಣೆ ನಡೆಯಿತು.

Related posts

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಉದ್ಯಮಿ ಸತೀಶ್ ಪೂಜಾರಿ ಬೆಳಪು ಮತ್ತು ಪ್ರಭಾಕರ ಸುವರ್ಣ ಕರ್ನಿರೆ ಭೇಟಿ

Suddi Udaya

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌ. ಶಾಲೆ ಶಾಲೆಯ ವಿದ್ಯಾರ್ಥಿನಿ ಕು| ಪ್ರಜ್ಞಾ ದ್ವಿತೀಯ ಸ್ಥಾನ

Suddi Udaya

ಕುಮಟಾ ಸದ್ಗುರು ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಚಾರಣೆ: ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪಾದುಕ ಪೂಜೆ

Suddi Udaya
error: Content is protected !!