23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

ಬೆಳ್ತಂಗಡಿ: “ನಮ್ಮ ದೇಶದ ಶ್ರೀಮಂತಿಕೆ ಇರುವುದು ಇಲ್ಲಿನ ಇತಿಹಾಸ ಮತ್ತು ಸಂಸ್ಕೃತಿಯಲ್ಲಿ. ರೈತನಿಲ್ಲದೆ ಯಾರೂ ಬದುಕಲು ಸಾಧ್ಯವಿಲ್ಲ. ರೈತರ ಬದುಕನ್ನು ಪೇಟೆಯಲ್ಲಿದ್ದವರು ಅರಿತುಕೊಳ್ಳಬೇಕು. ಹಳ್ಳಿಗಳನ್ನು ಪೇಟೆಗಳಂತೆ ಅಭಿವೃದ್ಧಿಗೊಳಿಸಬೇಕು” ಎಂದು ಶಿರ್ತಾಡಿ ಶಿಮುಂಜೆಗುತ್ತು ಸಂಪತ್ ಸಾಮ್ರಾಜ್ಯ ಹೇಳಿದರು.

ಅವರು ದ.ಕ.ಜಿ.ಪ.ಕಿರಿಯ ಪ್ರಾಥಮಿಕ ಶಾಲೆ – ಮಕ್ಕಿ ಇಲ್ಲಿ ನಡೆದ ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಶಿರ್ತಾಡಿ ಶ್ರೀ ಭುವನಜ್ಯೋತಿ ವಸತಿ ಶಾಲೆಯ ಪ್ರಾಂಶುಪಾಲರಾದ ಪ್ರಶಾಂತ್ ಡಿ’ಸೋಜ ಮಾತನಾಡಿ “ಶ್ರಮವಿಲ್ಲದ ಜೀವನ ವ್ಯರ್ಥ. ಶ್ರಮವಿದ್ದರೆ ಮಾತ್ರ ಒಬ್ಬ ವ್ಯಕ್ತಿ ತನ್ನ ಗುರಿಯನ್ನು ಸಾಧಿಸಬಲ್ಲ” ಎಂದು ಹೇಳಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಸಂತ ಅಂತೋನಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ವಂ.ಡಾ. ಆಲ್ವಿನ್ ಸೆರಾವೊ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆ ಕೇಳದಪೇಟೆ ಶಾಲೆಯ ಮುಖ್ಯೋಪಾಧ್ಯಾಯ ಪ್ರಶಾಂತ್.ಎ., ಶ್ರೀ ಪಂಚಶಕ್ತಿ ದೈವಸ್ಥಾನ ಮಕ್ಕಿ ಅಧ್ಯಕ್ಷ ನಾರಾಯಣ ಭಟ್, ಶಿರ್ತಾಡಿ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷ ಶಶಿಧರ ದೇವಾಡಿಗ ಗೇಂದೋಟ್ಟು, ಲೂಯಿಸ್ ಡಿ’ಸೋಜ ಮಕ್ಕಿ ಭಾಗವಹಿಸಿದ್ದರು.

ವೇದಿಕೆಯಲ್ಲಿ ಸಂತ ಅಂತೋನಿ ಪದವಿ ಕಾಲೇಜಿನ ಉಪ ಪ್ರಾಂಶುಪಾಲ ಸಂತೋಷ್ ಸಲ್ಡಾನ, ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಬೇಬಿ, ಎನ್ ಎಸ್ ಎಸ್ ಕಾರ್ಯದರ್ಶಿಗಳಾದ ಕು.ವಿಘ್ನೇಶ್ ಆಚಾರ್ಯ, ಕು.ಅನ್ವಿತಾ ರಾವ್ ಹಾಗೂ ವಿದ್ಯಾರ್ಥಿ ಸಂಘದ ಅದ್ಯಕ್ಷ ಕೇಶವ್ ಶರ್ಮ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ದಿನೇಶ್ ಬಿ.ಕೆ ಬಳಂಜ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಉಪನ್ಯಾಸಕ ಅವಿನಾಶ್ ಲೋಬೊ ಧನ್ಯವಾದವಿತ್ತರು .ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಸಂತೋಷ್ ದೇವಾಡಿಗ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

Suddi Udaya

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

Suddi Udaya

ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿಯವರಿಂದ ರೂ 5 ಲಕ್ಷ ಸಹಾಯಧನ

Suddi Udaya

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ದೊಂಡೊಲೆಯ ವಿಕಲಚೇತನ ಕುಟುಂಬಕ್ಕೆ ಸಹಾಯಹಸ್ತ : ಅರ್ಹರ ಸೇವೆಗೆ ಬೆಳ್ತಂಗಡಿ ಲಯನ್ಸ್ ತೆರೆದುಕೊಂಡಿದೆ-ವಲಯಾಧ್ಯಕ್ಷ ದಿನೇಶ್

Suddi Udaya

ರಾಜ್ಯ ಮಟ್ಟದಲ್ಲಿ ಕಪ್ಪು ಪಟ್ಟಿ ಧರಿಸಿ ಪಂಚಾಯತ್ ನೌಕರರ ಮುಂದುವರಿದ ಪ್ರತಿಭಟನೆ : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ನೀಡುವುದಾಗಿ ವಿಧಾನಸಭಾಧ್ಯಕ್ಷರ ಭರವಸೆ

Suddi Udaya
error: Content is protected !!