ನಿಟ್ಟಡೆ :ಇಲ್ಲಿಯ ಪೆರ್ಮುಡ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ, ನದಿಯಿಂದ ಮರಳನ್ನು ಕಳವು ಮಾಡಿ, ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡ ಘಟನೆ ಎ.22ರಂದು ನಡೆದಿದೆ.
ಎ. 22ರಂದು ಮಧ್ಯಾಹ್ನ, ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಪೆರ್ಮುಡ ಎಂಬಲ್ಲಿ, ಪಿಕ್ ಆಪ್ ವಾಹನ ನಂಬ್ರ ಕೆಎ 19 ಡಿ 8597 ನೇದರಲ್ಲಿ ಆರೋಪಿತನಾದ ಮೂಡುಕೋಡಿ ನಿವಾಸಿ ಮಹಮ್ಮದ್ ನೌಶಾದ್ (21) ಎಂಬಾತನು, ಯಾವುದೇ ಪರವಾನಿಗೆ ಇಲ್ಲದೇ, ಎಲ್ಲಿಂದಲೋ ನದಿಯಿಂದ ಮರಳನ್ನು ಕಳವು ಮಾಡಿ, ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿದ ಶ್ರೀಶೈಲ್ ಡಿ ಮುರಗೋಡ್ ಪಿಎಸ್ಐ (ಕಾ.ಸು) ವೇಣೂರು ಪೊಲೀಸ್ ಠಾಣೆರವರು ಹಾಗೂ ಸಿಬ್ಬಂದಿಗಳು, ಸದ್ರಿ ವಾಹನವನ್ನು ಸ್ವಾಧೀನಪಡಿಸಿಕೊಂಡು ವೇಣೂರು ಪೊಲೀಸ್ ಠಾಣೆಯಲ್ಲಿ ಅಕ್ರ 40/2024 ಕಲಂ 379 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.