July 23, 2026
ಶಾಲಾ ಕಾಲೇಜು

ಬದ್ಯಾರ್: ವಿದ್ವತ್ ಪಿಯು ಕಾಲೇಜ್ ಸಾಂಸ್ಕೃತಿಕ ಸೌರಭ

ಬದ್ಯಾರ್: ವಿದ್ವತ್ ಪಿಯು ಕಾಲೇಜ್ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಎ.೨೨ರಂದು ವೈಭವದಿಂದ ಮೂಡಿಬಂತು. ವಿದ್ವತ್ ಕಾಲೇಜು ಶಿಕ್ಷಣದ ಜೊತೆಗೆ ಪೂರಕವಾಗಿ ಸಾಂಸ್ಕೃತಿಕ ಚಟುವಟಿಕೆಗಳು ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಅಡಿಪಾಯ ಎಂದು ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ಪ್ರಾಸ್ತಾವಿಕ ನುಡಿಗಳನ್ನು ಆಡಿದರು.

ವಿಶ್ವಸ್ಥರಾದ ಎಂ.ಕೆ ಕಾಶಿನಾಥ್ ಮತ್ತು ವೇದವ್ಯಾಸ ಶಿಶು ಮಂದಿರದ ಅಧ್ಯಕ್ಷರಾದ ಶ್ರೀಮತಿ ಇಂದುಮತಿಯವರು ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು. ವೇದವ್ಯಾಸ ಶಿಶು

ಮಂದಿರದ ಪುಟಾಣಿಗಳು ಮತ್ತು ಬಾಲಗೋಕುಲದ ವಿದ್ಯಾರ್ಥಿಗಳಿಂದ ಮನೋರಂಜನಾತ್ಮಕ ನೃತ್ಯಗಳು ನಡೆದವು. ಕಾರ್ಯಕ್ರಮದಲ್ಲಿ ವಿದ್ವತ್ ಶಿಕ್ಷಣ ಪ್ರತಿಷ್ಠಾನದ ವಿಶ್ವಸ್ಥರು ಉಪನ್ಯಾಸಕರು, ವೇದವ್ಯಾಸ ಶಿಶು ಮಂದಿರದ ಶಿಕ್ಷಕರು,ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು. ವಿದ್ವತ್ ಪಿಯು ಕಾಲೇಜಿನ ಪ್ರಾಚಾರ್ಯರಾದ ಪ್ರಜ್ವಲ್ ಜೆ ವಂದಿಸಿದರು. ಕನ್ನಡ ಉಪನ್ಯಾಸಕ ನೀಲಕಂಠ ಕಾರ್ಯಕ್ರಮದ ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

Suddi Udaya

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಮಧುಶ್ರೀ ವರ್ಷದ ಯುವ ವಿಜ್ಞಾನಿ ಪ್ರಶಸ್ತಿ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ ಮಕ್ಕಳಿಗೆ ಪಿಂಕ್ (ಸಖೀ) ಬೂತ್ ನ ಪರಿಕಲ್ಪನೆಯ ಪಾಠ

Suddi Udaya

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ 4ನೇ ವರ್ಷದ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆ ವೇಣೂರು ಪ್ರೌಢ ಶಾಲಾ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಆನ್ಲೈನ್ ರಸಪ್ರಶ್ನೆಗೆ ಆಯ್ಕೆ

Suddi Udaya
error: Content is protected !!