July 23, 2026
Uncategorized

ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ಉಜಿರೆಯಲ್ಲಿ ನಡೆದ ರೋಡ್ ಶೋ ನ ಯಶಸ್ಸಿನ ಕುರಿತು ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಗೌಡ ಪುದುವೆಟ್ಟು ಅವರಿಗೆ ಕರೆ ಮಾಡಿ ಅಭಿನಂದಿಸಿದರು.

ವಿಜೇಯಂದ್ರರವರು ಕರೆ ಮೂಲಕ ಮಾತನಾಡಿ ಉಜಿರೆಯಲ್ಲಿ ನಡೆದ ರೋಡ್ ಶೋ ಕಾರ್ಯಕ್ರಮ ತುಂಬಾ ಅದ್ಬುತವಾಗಿತ್ತು. ನಮ್ಮ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಎರಡೂವರೆ ತಾಸುವಿನಿಂದ ತಾಯಂದಿರು ಕಾಯುತ್ತಿದ್ದರು ಮುಖದಲ್ಲಿ ಸಂತೋಷ ಕಾಣುತ್ತಿತ್ತು. ಲೋಕಸಭಾ ಚುನಾವಣೆಯ ದೃಷ್ಟಿಯಿಂದ 2019 ರ ಚುನಾವಣೆಗಿಂತ ಈ ಬಾರಿ ಪ್ರತಿ ಬೂತ್ ನಲ್ಲಿ 150 ಮತಗಳು ಹೆಚ್ಚಾಗಬೇಕು. ನಾವು ಗೆದ್ದೆ ಗೆಲ್ಲುತ್ತೇವೆ ಅದರಲ್ಲಿ ಪ್ರಶ್ನೆಯಿಲ್ಲ. ಆದರೆ ಎಷ್ಟು ಮತಗಳ‌ ಅಂತರದಿಂದ ಗೆಲ್ಲುತ್ತೇವೆ ಎಂಬುದು ಮುಖ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿಜೀಯವರ ಆಡಳಿತ, ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಿಳಿಸುವ ಪ್ರಯತ್ನವಾಗಬೇಕೆಂದು ತಿಳಿಸಿದರು.

ಯಶವಂತ್ ಡೆಚ್ಚಾರ್ ರವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಕಾರ್ಯಕರ್ತರಿಗೆ ಉತ್ತಮ ಸಪೋರ್ಟ್ ಮಾಡುತ್ತಿದ್ದಾರೆ. ಬೆಳ್ತಂಗಡಿ ತುಂಬಾ ಅಭಿವೃದ್ಧಿಯಾಗಿದೆ ಎಂದರು.

Related posts

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ರವರಿಗೆ ಮೇಲಂತಬೆಟ್ಟು ಭಗವತಿ ಕ್ಷೇತ್ರದಲ್ಲಿ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪ್ರಕಾಶ್ ರವರಿಗೆ ಕೃತಕ ಕಾಲಿನ ವ್ಯವಸ್ಥೆ

Suddi Udaya

ಸ್ವಚ್ಛತಾ ಕೀ ಸೇವಾ ಆಂದೋಲನ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಸ್ಪೆಕ್ಟ್ರಮ್ ಧರ್ಮಸ್ಥಳ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya
error: Content is protected !!