Uncategorized

ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ಉಜಿರೆಯಲ್ಲಿ ನಡೆದ ರೋಡ್ ಶೋ ನ ಯಶಸ್ಸಿನ ಕುರಿತು ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಗೌಡ ಪುದುವೆಟ್ಟು ಅವರಿಗೆ ಕರೆ ಮಾಡಿ ಅಭಿನಂದಿಸಿದರು.

ವಿಜೇಯಂದ್ರರವರು ಕರೆ ಮೂಲಕ ಮಾತನಾಡಿ ಉಜಿರೆಯಲ್ಲಿ ನಡೆದ ರೋಡ್ ಶೋ ಕಾರ್ಯಕ್ರಮ ತುಂಬಾ ಅದ್ಬುತವಾಗಿತ್ತು. ನಮ್ಮ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಎರಡೂವರೆ ತಾಸುವಿನಿಂದ ತಾಯಂದಿರು ಕಾಯುತ್ತಿದ್ದರು ಮುಖದಲ್ಲಿ ಸಂತೋಷ ಕಾಣುತ್ತಿತ್ತು. ಲೋಕಸಭಾ ಚುನಾವಣೆಯ ದೃಷ್ಟಿಯಿಂದ 2019 ರ ಚುನಾವಣೆಗಿಂತ ಈ ಬಾರಿ ಪ್ರತಿ ಬೂತ್ ನಲ್ಲಿ 150 ಮತಗಳು ಹೆಚ್ಚಾಗಬೇಕು. ನಾವು ಗೆದ್ದೆ ಗೆಲ್ಲುತ್ತೇವೆ ಅದರಲ್ಲಿ ಪ್ರಶ್ನೆಯಿಲ್ಲ. ಆದರೆ ಎಷ್ಟು ಮತಗಳ‌ ಅಂತರದಿಂದ ಗೆಲ್ಲುತ್ತೇವೆ ಎಂಬುದು ಮುಖ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿಜೀಯವರ ಆಡಳಿತ, ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಿಳಿಸುವ ಪ್ರಯತ್ನವಾಗಬೇಕೆಂದು ತಿಳಿಸಿದರು.

ಯಶವಂತ್ ಡೆಚ್ಚಾರ್ ರವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಕಾರ್ಯಕರ್ತರಿಗೆ ಉತ್ತಮ ಸಪೋರ್ಟ್ ಮಾಡುತ್ತಿದ್ದಾರೆ. ಬೆಳ್ತಂಗಡಿ ತುಂಬಾ ಅಭಿವೃದ್ಧಿಯಾಗಿದೆ ಎಂದರು.

Related posts

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಮ್ಯಾನೇಜ್ಮೆಂಟ್ ಪೇಸ್ಟ್ ನಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ

Suddi Udaya

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್ ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’

Suddi Udaya

ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ , ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ

Suddi Udaya
error: Content is protected !!