23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

ನಾವೂರು: ನಾವೂರು ಗ್ರಾಮದ ಪುಳಿತ್ತಡಿ, ಕುದ್ರೋಳಿ ಪ್ರದೇಶದ ಮೂಲನಿವಾಸಿ ಮಲೆಕುಡಿಯ ಸಮುದಾಯದವರು ತಮ್ಮ ಪ್ರದೇಶಕ್ಕೆ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂಬ ಬೇಡಿಕೆಯನ್ನು ಮುಂದಿಟ್ಟು ಈ ಬಾರಿಯ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ನಿರ್ಧರಿಸಿ, ತಮ್ಮ ಪ್ರದೇಶದಲ್ಲಿ ಬ್ಯಾನರ್ ಅಳವಡಿಸಿದ್ದಾರೆ.


ಈ ಪರಿಸರದಲ್ಲಿ 22 ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬದವರಿದ್ದಾರೆ. ಸುಮಾರು ೧೦೦ಮಂದಿ ಮತದಾರರಿದ್ದಾರೆ. ದಶಕಗಳಿಂದ ಈ ಜನರು ತಮ್ಮ ಪ್ರದೇಶಕ್ಕೆ ರಸ್ತೆ ಹಾ ಗೂ ವಿದ್ಯುತ್ ಸಂಪರ್ಕ ಒದಗಿಸುವಂತೆ ನಿರಂತರ ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಆದರೆ ಕುದುರೇಮುಖ ರಾಷ್ಟ್ರೀಯ ಉದ್ಯಾನವದ ಒಳಗಿರುವ ಈ ಕುಟುಂಬಗಳಿಗೆ ಇನ್ನೂ ಯಾವುದೇ ಮೂಲಭೂತ ಸೌಲಭ್ಯಗಳು ಲಭಿಸಿಲ್ಲ. ತಮ್ಮ ಬೇಡಿಕೆಗಳ ಬಗ್ಗೆ ಗ್ರಾಮ ಪಂಚಾಯತಿನಿಂದ ಹಿಡಿದು ಪ್ರಧಾನಿಯವರೆಗೆ ಎಲ್ಲರಿಗೂ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.


ಇದರಿಂದ ಬೇಸತ್ತ ನಾವೂರು ಗ್ರಾಮದ ಅಲ್ಯ, ಪುಳಿತ್ತಡಿ, ಎರ್ಮಲೆ ಮಂಜಲ,ಕುದ್ರೋಳಿ, ಕಾಸರೋಳಿ ಪರಿಸರದ ಆದಿವಾಸಿ ಕುಟುಂಬಗಳು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೋಟಾ ಮತವನ್ನು ಚಲಾಯಿಸುವುದಾಗಿ ಬ್ಯಾನರ್ ಅಳವಡಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

Related posts

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

Suddi Udaya

ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Suddi Udaya
error: Content is protected !!