July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

ನಾವೂರು: ನಾವೂರು ಗ್ರಾಮದ ಪುಳಿತ್ತಡಿ, ಕುದ್ರೋಳಿ ಪ್ರದೇಶದ ಮೂಲನಿವಾಸಿ ಮಲೆಕುಡಿಯ ಸಮುದಾಯದವರು ತಮ್ಮ ಪ್ರದೇಶಕ್ಕೆ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂಬ ಬೇಡಿಕೆಯನ್ನು ಮುಂದಿಟ್ಟು ಈ ಬಾರಿಯ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ನಿರ್ಧರಿಸಿ, ತಮ್ಮ ಪ್ರದೇಶದಲ್ಲಿ ಬ್ಯಾನರ್ ಅಳವಡಿಸಿದ್ದಾರೆ.


ಈ ಪರಿಸರದಲ್ಲಿ 22 ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬದವರಿದ್ದಾರೆ. ಸುಮಾರು ೧೦೦ಮಂದಿ ಮತದಾರರಿದ್ದಾರೆ. ದಶಕಗಳಿಂದ ಈ ಜನರು ತಮ್ಮ ಪ್ರದೇಶಕ್ಕೆ ರಸ್ತೆ ಹಾ ಗೂ ವಿದ್ಯುತ್ ಸಂಪರ್ಕ ಒದಗಿಸುವಂತೆ ನಿರಂತರ ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಆದರೆ ಕುದುರೇಮುಖ ರಾಷ್ಟ್ರೀಯ ಉದ್ಯಾನವದ ಒಳಗಿರುವ ಈ ಕುಟುಂಬಗಳಿಗೆ ಇನ್ನೂ ಯಾವುದೇ ಮೂಲಭೂತ ಸೌಲಭ್ಯಗಳು ಲಭಿಸಿಲ್ಲ. ತಮ್ಮ ಬೇಡಿಕೆಗಳ ಬಗ್ಗೆ ಗ್ರಾಮ ಪಂಚಾಯತಿನಿಂದ ಹಿಡಿದು ಪ್ರಧಾನಿಯವರೆಗೆ ಎಲ್ಲರಿಗೂ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.


ಇದರಿಂದ ಬೇಸತ್ತ ನಾವೂರು ಗ್ರಾಮದ ಅಲ್ಯ, ಪುಳಿತ್ತಡಿ, ಎರ್ಮಲೆ ಮಂಜಲ,ಕುದ್ರೋಳಿ, ಕಾಸರೋಳಿ ಪರಿಸರದ ಆದಿವಾಸಿ ಕುಟುಂಬಗಳು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೋಟಾ ಮತವನ್ನು ಚಲಾಯಿಸುವುದಾಗಿ ಬ್ಯಾನರ್ ಅಳವಡಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

Related posts

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಹಳೆ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತ

Suddi Udaya

ಕನ್ಯಾಡಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ

Suddi Udaya

ಮುಂಡಾಜೆ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಮತ್ತು ದೀಪ ಪ್ರದಾನ ಕಾರ್ಯಕ್ರಮ

Suddi Udaya

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya
error: Content is protected !!