23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

ನಾವೂರು: ನಾವೂರು ಗ್ರಾಮದ ಪುಳಿತ್ತಡಿ, ಕುದ್ರೋಳಿ ಪ್ರದೇಶದ ಮೂಲನಿವಾಸಿ ಮಲೆಕುಡಿಯ ಸಮುದಾಯದವರು ತಮ್ಮ ಪ್ರದೇಶಕ್ಕೆ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂಬ ಬೇಡಿಕೆಯನ್ನು ಮುಂದಿಟ್ಟು ಈ ಬಾರಿಯ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ನಿರ್ಧರಿಸಿ, ತಮ್ಮ ಪ್ರದೇಶದಲ್ಲಿ ಬ್ಯಾನರ್ ಅಳವಡಿಸಿದ್ದಾರೆ.


ಈ ಪರಿಸರದಲ್ಲಿ 22 ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬದವರಿದ್ದಾರೆ. ಸುಮಾರು ೧೦೦ಮಂದಿ ಮತದಾರರಿದ್ದಾರೆ. ದಶಕಗಳಿಂದ ಈ ಜನರು ತಮ್ಮ ಪ್ರದೇಶಕ್ಕೆ ರಸ್ತೆ ಹಾ ಗೂ ವಿದ್ಯುತ್ ಸಂಪರ್ಕ ಒದಗಿಸುವಂತೆ ನಿರಂತರ ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಆದರೆ ಕುದುರೇಮುಖ ರಾಷ್ಟ್ರೀಯ ಉದ್ಯಾನವದ ಒಳಗಿರುವ ಈ ಕುಟುಂಬಗಳಿಗೆ ಇನ್ನೂ ಯಾವುದೇ ಮೂಲಭೂತ ಸೌಲಭ್ಯಗಳು ಲಭಿಸಿಲ್ಲ. ತಮ್ಮ ಬೇಡಿಕೆಗಳ ಬಗ್ಗೆ ಗ್ರಾಮ ಪಂಚಾಯತಿನಿಂದ ಹಿಡಿದು ಪ್ರಧಾನಿಯವರೆಗೆ ಎಲ್ಲರಿಗೂ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.


ಇದರಿಂದ ಬೇಸತ್ತ ನಾವೂರು ಗ್ರಾಮದ ಅಲ್ಯ, ಪುಳಿತ್ತಡಿ, ಎರ್ಮಲೆ ಮಂಜಲ,ಕುದ್ರೋಳಿ, ಕಾಸರೋಳಿ ಪರಿಸರದ ಆದಿವಾಸಿ ಕುಟುಂಬಗಳು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೋಟಾ ಮತವನ್ನು ಚಲಾಯಿಸುವುದಾಗಿ ಬ್ಯಾನರ್ ಅಳವಡಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

Related posts

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya

ತ್ರೋಬಾಲ್ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ಬೆಳ್ತಂಗಡಿ:ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಅವರ 15ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಮುಗುಳಿ -ಬ್ರಹ್ಮಯಕ್ಷ ಬಸದಿ ರಸ್ತೆ ಉದ್ಘಾಟನೆ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ಮುಂದೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Suddi Udaya
error: Content is protected !!