ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

Suddi Udaya

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶರ ಸಂಘ ಕನ್ನಡ ವಿಭಾಗ ಶೇಷಾದ್ರಿ ಪುರಂ ಕಾಲೇಜ್ ಇವರ ಸಂಯುಕ್ತಾಶ್ರಯದಲ್ಲಿ ಶೇಷಾದ್ರಿ ಪುರಂ ಕಾಲೇಜ್ ನ ಕಾನ್ಫರೆನ್ಸ್ ಹಾಲ್ ನಲ್ಲಿ ಇಂದು (23) ನಡೆದ ವಿಶ್ವ ಪುಸ್ತಕ ದಿನಾಚರಣೆಯಲ್ಲಿ ಹಿರಿಯ ಲೇಖಕ ನಾಡೋಜ ಡಾ ಬರಗೂರು ರಾಮಚಂದ್ರಪ್ಪನವರು, ನಾಡೋಜ ಡಾ ವೂಡೆ‌ ಪಿ ಕೃಷ್ಣ ಗಾಂಧಿವಾದಿ ಮತ್ತು ಶಿಕ್ಷಣ ತಜ್ಞರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ತಮ್ಮ ಸಂಘದ 20ನೇ ವಾರ್ಷಿಕೋತ್ಸವದ ಸವಿನೆನಪಿಗಾಗಿ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಪದಾಧಿಕಾರಿಯಾಗಿರುವ ಲೇಖಕಿ ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರೂ ಸನ್ಮಾನ ಸ್ವೀಕರಿಸಿದರು.
ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ಅಧ್ಯಕ್ಷರು ನಿಡಸಾಲೆ ಪುಟ್ಟಸ್ವಾಮಯ್ಯ ನವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Comment

error: Content is protected !!