22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

ಸುಲ್ಕೇರಿ :ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟ ಇದರ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಎಂಬ ವಿಶೇಷ ಕಾರ್ಯಕ್ರಮವನ್ನು ಸುಲ್ಕೇರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಲ್ಕೇರಿ ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ವಸಂತಿ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಮೇಲ್ವಿಚಾರಕರಾದ ಶ್ರೀಮತಿ ದಮಯಂತಿ, ಸೇವಪ್ರತಿನಿಧಿ ಶ್ರೀಮತಿ ಮಮತಾ ,ಜನಜಾಗೃತಿ ವೇದಿಕೆಯ ಸದಸ್ಯ ಸದಾನಂದ ಗೌಡ ,ಒಕ್ಕೂಟದ ಕಾರ್ಯದರ್ಶಿ ಮತ್ತು ಜೊತೆ ಕಾರ್ಯದರ್ಶಿ ಉಪಸ್ಥಿತರಿದ್ದರು.

ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಚೈತ್ರಾ, ಪ್ರಿಯಾ ಹಾಗೂ ಆದರ್ಶ್ ಜಲಸಂರಕ್ಷಣೆಯ ಕುರಿತು ಮಾಹಿತಿ ನೀಡಿದ ಇವರು ಜೀವ ಸಂಕುಲದ ಉಗಮ, ಅಸ್ತಿತ್ವ ಮತ್ತು ಬೆಳವಣಿಗೆಗೆ ಕಾರಣವಾಗಿರುವ ನೀರನ್ನು ಸಮರ್ಪಕವಾಗಿ ನಿರ್ವಹಿಸುವುದರ ಮೂಲಕ ಹೇಗೆ ಸಂರಕ್ಷಿಸಬಹುದು ಹಾಗೂ ನೀರಿನ ಸಮರ್ಪಕ ನಿರ್ವಹಣೆಯ ವಿಧಾನವನ್ನು ತಿಳಿಸಿದರು.
ಕು| ಪ್ರಿಯ ಸ್ವಾಗತಿಸಿ ,ಆದರ್ಶ್ ವಂದಿಸಿದರು. ಶ್ರೀಮತಿ ಪುಷ್ಪ ಕಾರ್ಯಕ್ರಮ ನಿರೂಪಿಸಿದರು.

Related posts

ಮೇಲಂತಬೆಟ್ಟು: ಅಣ್ಣು ಪೂಜಾರಿ ಅಡ್ಕದಬೈಲ್ ನಿಧನ

Suddi Udaya

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇನ್ವೆಸ್ಟಿಚರ್ ಸಮಾರಂಭ

Suddi Udaya

ನೆರಿಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ಪೆರೋಡಿತ್ತಾಯಕಟ್ಟೆ ಸ. ಉ. ಪ್ರಾ. ಶಾಲಾ ಮೂವರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!