22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

ಗುರುವಾಯನಕೆರೆ: ವಿಜ್ಞಾನ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಗಳಲ್ಲಿ ವಿಶೇಷ ಸಾಧನೆ ಮಾಡಿ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಹತ್ತನೆಯ ತರಗತಿಯ ತನಕ ಸರಕಾರಿ ಶಾಲೆಯಲ್ಲಿ ಓದಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ತೀರ್ಮಾನಿಸಿದೆ.


ಗ್ರಾಮೀಣ ಪ್ರದೇಶದ, ಅವಕಾಶ ವಂಚಿತ ವಿದ್ಯಾರ್ಥಿಗಳ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಕನಸು ನನಸು ಮಾಡಲು ಯೋಗ್ಯ ನೀಟ್ ಮತ್ತು ಜೆ ಇ ಇ/ ಸಿ ಇ ಟಿ ಕೋಚಿಂಗ್ ನೀಡಲು ತೀರ್ಮಾನಿಸಲಾಗಿದೆ. ರಾಷ್ಟ್ರಮಟ್ಟದ ಉನ್ನತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಾದ AIIMS, ರಾಷ್ಟ್ರ ಮಟ್ಟದ ಉನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ IIT, NIIT ಗಳ ಪ್ರವೇಶಾತಿ ಪರೀಕ್ಷೆಗಳಿಗೆ ತರಬೇತು ಗೊಳಿಸಿ ವಿದ್ಯಾರ್ಥಿಗಳ ಕನಸನ್ನು ನನಸು ಮಾಡಲು ಎಕ್ಸೆಲ್ ಪದವಿಪೂರ್ವ ಕಾಲೇಜು ಅಣಿಗೊಂಡಿದೆ.

ಅದೇ ರೀತಿ ವಾಣಿಜ್ಯ ವಿಭಾಗದಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗಲು ಸಿ. ಎ ಫೌಂಡೇಶನ್ ಕೋರ್ಸ್, ಕಂಪನಿ ಸೆಕ್ರೆಟರಿ ಹುದ್ದೆಗಾಗಿ ಸಿ. ಎಸ್ ಫೌಂಡೇಶನ್ ಹಾಗೂ ರಾಷ್ಟ್ರ ಮಟ್ಟದ ಕಾನೂನು ಪದವಿ ಪ್ರವೇಶಕ್ಕಾಗಿ ಕ್ಲಾಟ್ ಕೋಚಿಂಗ್ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9880899769, 9902284110 ಸಂಪರ್ಕಿಸಬಹುದು ಎಂದು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ದಿನಾಚರಣೆ

Suddi Udaya

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya

ಓಡಿಲ್ನಾಳ ಶಾಲೆಯಲ್ಲಿ ನಡೆಯುತ್ತಿರುವ ವಾಣಿ ಪ.ಪೂ. ಕಾಲೇಜಿನ ಎನ್ನೆಸ್ಸೆಸ್‌ ಶಿಬಿರಕ್ಕೆ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಭೇಟಿ

Suddi Udaya

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya
error: Content is protected !!