26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

ಬೆಳ್ತಂಗಡಿ: “ನಮ್ಮ ದೇಶದ ಶ್ರೀಮಂತಿಕೆ ಇರುವುದು ಇಲ್ಲಿನ ಇತಿಹಾಸ ಮತ್ತು ಸಂಸ್ಕೃತಿಯಲ್ಲಿ. ರೈತನಿಲ್ಲದೆ ಯಾರೂ ಬದುಕಲು ಸಾಧ್ಯವಿಲ್ಲ. ರೈತರ ಬದುಕನ್ನು ಪೇಟೆಯಲ್ಲಿದ್ದವರು ಅರಿತುಕೊಳ್ಳಬೇಕು. ಹಳ್ಳಿಗಳನ್ನು ಪೇಟೆಗಳಂತೆ ಅಭಿವೃದ್ಧಿಗೊಳಿಸಬೇಕು” ಎಂದು ಶಿರ್ತಾಡಿ ಶಿಮುಂಜೆಗುತ್ತು ಸಂಪತ್ ಸಾಮ್ರಾಜ್ಯ ಹೇಳಿದರು.

ಅವರು ದ.ಕ.ಜಿ.ಪ.ಕಿರಿಯ ಪ್ರಾಥಮಿಕ ಶಾಲೆ – ಮಕ್ಕಿ ಇಲ್ಲಿ ನಡೆದ ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಶಿರ್ತಾಡಿ ಶ್ರೀ ಭುವನಜ್ಯೋತಿ ವಸತಿ ಶಾಲೆಯ ಪ್ರಾಂಶುಪಾಲರಾದ ಪ್ರಶಾಂತ್ ಡಿ’ಸೋಜ ಮಾತನಾಡಿ “ಶ್ರಮವಿಲ್ಲದ ಜೀವನ ವ್ಯರ್ಥ. ಶ್ರಮವಿದ್ದರೆ ಮಾತ್ರ ಒಬ್ಬ ವ್ಯಕ್ತಿ ತನ್ನ ಗುರಿಯನ್ನು ಸಾಧಿಸಬಲ್ಲ” ಎಂದು ಹೇಳಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಸಂತ ಅಂತೋನಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ವಂ.ಡಾ. ಆಲ್ವಿನ್ ಸೆರಾವೊ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆ ಕೇಳದಪೇಟೆ ಶಾಲೆಯ ಮುಖ್ಯೋಪಾಧ್ಯಾಯ ಪ್ರಶಾಂತ್.ಎ., ಶ್ರೀ ಪಂಚಶಕ್ತಿ ದೈವಸ್ಥಾನ ಮಕ್ಕಿ ಅಧ್ಯಕ್ಷ ನಾರಾಯಣ ಭಟ್, ಶಿರ್ತಾಡಿ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷ ಶಶಿಧರ ದೇವಾಡಿಗ ಗೇಂದೋಟ್ಟು, ಲೂಯಿಸ್ ಡಿ’ಸೋಜ ಮಕ್ಕಿ ಭಾಗವಹಿಸಿದ್ದರು.

ವೇದಿಕೆಯಲ್ಲಿ ಸಂತ ಅಂತೋನಿ ಪದವಿ ಕಾಲೇಜಿನ ಉಪ ಪ್ರಾಂಶುಪಾಲ ಸಂತೋಷ್ ಸಲ್ಡಾನ, ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಬೇಬಿ, ಎನ್ ಎಸ್ ಎಸ್ ಕಾರ್ಯದರ್ಶಿಗಳಾದ ಕು.ವಿಘ್ನೇಶ್ ಆಚಾರ್ಯ, ಕು.ಅನ್ವಿತಾ ರಾವ್ ಹಾಗೂ ವಿದ್ಯಾರ್ಥಿ ಸಂಘದ ಅದ್ಯಕ್ಷ ಕೇಶವ್ ಶರ್ಮ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ದಿನೇಶ್ ಬಿ.ಕೆ ಬಳಂಜ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಉಪನ್ಯಾಸಕ ಅವಿನಾಶ್ ಲೋಬೊ ಧನ್ಯವಾದವಿತ್ತರು .ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಸಂತೋಷ್ ದೇವಾಡಿಗ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಅವರನ್ನು ಭೇಟಿಯಾದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮೋಹಿತ್

Suddi Udaya

ಫೆ.8: ಅಗ್ರಿಲೀಫ್ 2.0 – ‘ರೈತರ ಜೊತೆ ವಿಶ್ವದ ಕಡೆ’ ವಿಸ್ತೃತ ಘಟಕದ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ: ಮರದ ಕೊಂಬೆಗಳು ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

Suddi Udaya

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya
error: Content is protected !!