September 15, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

ನಿಟ್ಟಡೆ :ಇಲ್ಲಿಯ ಪೆರ್ಮುಡ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ, ನದಿಯಿಂದ ಮರಳನ್ನು ಕಳವು ಮಾಡಿ, ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡ ಘಟನೆ ಎ.22ರಂದು ನಡೆದಿದೆ.

ಎ. 22ರಂದು ಮಧ್ಯಾಹ್ನ, ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಪೆರ್ಮುಡ ಎಂಬಲ್ಲಿ, ಪಿಕ್‌ ಆಪ್‌ ವಾಹನ ನಂಬ್ರ ಕೆಎ 19 ಡಿ 8597 ನೇದರಲ್ಲಿ ಆರೋಪಿತನಾದ ಮೂಡುಕೋಡಿ ನಿವಾಸಿ ಮಹಮ್ಮದ್ ನೌಶಾದ್ (21) ಎಂಬಾತನು, ಯಾವುದೇ ಪರವಾನಿಗೆ ಇಲ್ಲದೇ, ಎಲ್ಲಿಂದಲೋ ನದಿಯಿಂದ ಮರಳನ್ನು ಕಳವು ಮಾಡಿ, ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿದ ಶ್ರೀಶೈಲ್‌ ಡಿ ಮುರಗೋಡ್‌ ಪಿಎಸ್‌ಐ (ಕಾ.ಸು) ವೇಣೂರು ಪೊಲೀಸ್ ಠಾಣೆರವರು ಹಾಗೂ ಸಿಬ್ಬಂದಿಗಳು, ಸದ್ರಿ ವಾಹನವನ್ನು ಸ್ವಾಧೀನಪಡಿಸಿಕೊಂಡು ವೇಣೂರು ಪೊಲೀಸ್ ಠಾಣೆಯಲ್ಲಿ ಅಕ್ರ 40/2024 ಕಲಂ 379 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ರಾಣೆಬೆನ್ನೂರಿನ ಚೈತ್ರಾರಿಗೆ ಗಾಲಿಕುರ್ಚಿ ವಿತರಣೆ

Suddi Udaya

​ವಿದ್ಯಾಮಾತಾ ಅಕಾಡೆಮಿ, ಪುತ್ತೂರು: GPSTR, PSTR ಹಾಗೂ HSTR ಸರಕಾರಿ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಾಗಾರ!

Suddi Udaya

ಕಾರಿಂಜ ಮಧ್ವ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೆಳ್ತಂಗಡಿಯ ಯುವಕ ಸ್ಥಳದಲ್ಲೆ ಸಾವು

Suddi Udaya

ಇಂದು ಕಾಶಿ ಬೆಟ್ಟುನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
error: Content is protected !!