23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

ನಿಟ್ಟಡೆ :ಇಲ್ಲಿಯ ಪೆರ್ಮುಡ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ, ನದಿಯಿಂದ ಮರಳನ್ನು ಕಳವು ಮಾಡಿ, ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡ ಘಟನೆ ಎ.22ರಂದು ನಡೆದಿದೆ.

ಎ. 22ರಂದು ಮಧ್ಯಾಹ್ನ, ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಪೆರ್ಮುಡ ಎಂಬಲ್ಲಿ, ಪಿಕ್‌ ಆಪ್‌ ವಾಹನ ನಂಬ್ರ ಕೆಎ 19 ಡಿ 8597 ನೇದರಲ್ಲಿ ಆರೋಪಿತನಾದ ಮೂಡುಕೋಡಿ ನಿವಾಸಿ ಮಹಮ್ಮದ್ ನೌಶಾದ್ (21) ಎಂಬಾತನು, ಯಾವುದೇ ಪರವಾನಿಗೆ ಇಲ್ಲದೇ, ಎಲ್ಲಿಂದಲೋ ನದಿಯಿಂದ ಮರಳನ್ನು ಕಳವು ಮಾಡಿ, ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿದ ಶ್ರೀಶೈಲ್‌ ಡಿ ಮುರಗೋಡ್‌ ಪಿಎಸ್‌ಐ (ಕಾ.ಸು) ವೇಣೂರು ಪೊಲೀಸ್ ಠಾಣೆರವರು ಹಾಗೂ ಸಿಬ್ಬಂದಿಗಳು, ಸದ್ರಿ ವಾಹನವನ್ನು ಸ್ವಾಧೀನಪಡಿಸಿಕೊಂಡು ವೇಣೂರು ಪೊಲೀಸ್ ಠಾಣೆಯಲ್ಲಿ ಅಕ್ರ 40/2024 ಕಲಂ 379 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬಂಗ್ಲೆಗುಡ್ಡೆ ಶೋಧ: ಒಂದು ಅಸ್ಥಿಪಂಜರದ ಗುರುತು ಪತ್ತೆ ಹಚ್ಚಿದ ಎಸ್ ಐಟಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಬನ್ನಿಸ್ ಟಂಟೋಲ ದಳದ ಚಟುವಟಿಕಾ ಪ್ರಾರಂಭೋತ್ಸವ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ

Suddi Udaya

ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ- ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ

Suddi Udaya

ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!