ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

Suddi Udaya

ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ಉಜಿರೆಯಲ್ಲಿ ನಡೆದ ರೋಡ್ ಶೋ ನ ಯಶಸ್ಸಿನ ಕುರಿತು ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಗೌಡ ಪುದುವೆಟ್ಟು ಅವರಿಗೆ ಕರೆ ಮಾಡಿ ಅಭಿನಂದಿಸಿದರು.

ವಿಜೇಯಂದ್ರರವರು ಕರೆ ಮೂಲಕ ಮಾತನಾಡಿ ಉಜಿರೆಯಲ್ಲಿ ನಡೆದ ರೋಡ್ ಶೋ ಕಾರ್ಯಕ್ರಮ ತುಂಬಾ ಅದ್ಬುತವಾಗಿತ್ತು. ನಮ್ಮ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಎರಡೂವರೆ ತಾಸುವಿನಿಂದ ತಾಯಂದಿರು ಕಾಯುತ್ತಿದ್ದರು ಮುಖದಲ್ಲಿ ಸಂತೋಷ ಕಾಣುತ್ತಿತ್ತು. ಲೋಕಸಭಾ ಚುನಾವಣೆಯ ದೃಷ್ಟಿಯಿಂದ 2019 ರ ಚುನಾವಣೆಗಿಂತ ಈ ಬಾರಿ ಪ್ರತಿ ಬೂತ್ ನಲ್ಲಿ 150 ಮತಗಳು ಹೆಚ್ಚಾಗಬೇಕು. ನಾವು ಗೆದ್ದೆ ಗೆಲ್ಲುತ್ತೇವೆ ಅದರಲ್ಲಿ ಪ್ರಶ್ನೆಯಿಲ್ಲ. ಆದರೆ ಎಷ್ಟು ಮತಗಳ‌ ಅಂತರದಿಂದ ಗೆಲ್ಲುತ್ತೇವೆ ಎಂಬುದು ಮುಖ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿಜೀಯವರ ಆಡಳಿತ, ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಿಳಿಸುವ ಪ್ರಯತ್ನವಾಗಬೇಕೆಂದು ತಿಳಿಸಿದರು.

ಯಶವಂತ್ ಡೆಚ್ಚಾರ್ ರವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಕಾರ್ಯಕರ್ತರಿಗೆ ಉತ್ತಮ ಸಪೋರ್ಟ್ ಮಾಡುತ್ತಿದ್ದಾರೆ. ಬೆಳ್ತಂಗಡಿ ತುಂಬಾ ಅಭಿವೃದ್ಧಿಯಾಗಿದೆ ಎಂದರು.

Leave a Comment

error: Content is protected !!