Uncategorized

ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ಉಜಿರೆಯಲ್ಲಿ ನಡೆದ ರೋಡ್ ಶೋ ನ ಯಶಸ್ಸಿನ ಕುರಿತು ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಗೌಡ ಪುದುವೆಟ್ಟು ಅವರಿಗೆ ಕರೆ ಮಾಡಿ ಅಭಿನಂದಿಸಿದರು.

ವಿಜೇಯಂದ್ರರವರು ಕರೆ ಮೂಲಕ ಮಾತನಾಡಿ ಉಜಿರೆಯಲ್ಲಿ ನಡೆದ ರೋಡ್ ಶೋ ಕಾರ್ಯಕ್ರಮ ತುಂಬಾ ಅದ್ಬುತವಾಗಿತ್ತು. ನಮ್ಮ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಎರಡೂವರೆ ತಾಸುವಿನಿಂದ ತಾಯಂದಿರು ಕಾಯುತ್ತಿದ್ದರು ಮುಖದಲ್ಲಿ ಸಂತೋಷ ಕಾಣುತ್ತಿತ್ತು. ಲೋಕಸಭಾ ಚುನಾವಣೆಯ ದೃಷ್ಟಿಯಿಂದ 2019 ರ ಚುನಾವಣೆಗಿಂತ ಈ ಬಾರಿ ಪ್ರತಿ ಬೂತ್ ನಲ್ಲಿ 150 ಮತಗಳು ಹೆಚ್ಚಾಗಬೇಕು. ನಾವು ಗೆದ್ದೆ ಗೆಲ್ಲುತ್ತೇವೆ ಅದರಲ್ಲಿ ಪ್ರಶ್ನೆಯಿಲ್ಲ. ಆದರೆ ಎಷ್ಟು ಮತಗಳ‌ ಅಂತರದಿಂದ ಗೆಲ್ಲುತ್ತೇವೆ ಎಂಬುದು ಮುಖ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿಜೀಯವರ ಆಡಳಿತ, ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಿಳಿಸುವ ಪ್ರಯತ್ನವಾಗಬೇಕೆಂದು ತಿಳಿಸಿದರು.

ಯಶವಂತ್ ಡೆಚ್ಚಾರ್ ರವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಕಾರ್ಯಕರ್ತರಿಗೆ ಉತ್ತಮ ಸಪೋರ್ಟ್ ಮಾಡುತ್ತಿದ್ದಾರೆ. ಬೆಳ್ತಂಗಡಿ ತುಂಬಾ ಅಭಿವೃದ್ಧಿಯಾಗಿದೆ ಎಂದರು.

Related posts

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯ ಉನ್ನತ ಶ್ರೇಣಿಯ ಫಲಿತಾಂಶ

Suddi Udaya

ಕೆಪಿಎಸ್ ಪುಂಜಾಲಕಟ್ಟೆ: ಆಟಿ ತಿಂಗೊಲ್ಡ್ ಜೋಕ್ಲೆ ಗೇನ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya
error: Content is protected !!