25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ಏರ್ಪಡಿಸಲಾಯಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪುಂಜಾಲಕಟ್ಟೆ ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಶೈಲೇಶ್ ಕುಮಾರ್ ಡಿ ಎಚ್ ಇವರು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರಾಘವ ಎನ್ ಇವರು ವಹಿಸಿದ್ದರು.

ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸುಬ್ರಹ್ಮಣ್ಯ ಕೆ, ಸಂಸ್ಕೃತಿಕ ಸಂಘದ ಸಂಚಾಲಕರಾದ ಪ್ರೊಫೆಸರ್ ಸುರೇಶ್ ವಿ ಹಾಗೂ ಹಿರಿಯ ಪ್ರಾಧ್ಯಾಪಕರಾದ ಡಾಕ್ಟರ್ ಚೇತನ್ ಕುಮಾರ್ ಉಪಸ್ಥಿತರಿದ್ದರು. ಕಾಲೇಜಿನ ಕ್ರೀಡಾ ಸಾಧಕರಾದ ಭರತೇಶ್, ಯಶಸ್, ಮಹಾವೀರ, ತುಷಾರ್, ನಿವೇದಿತಾ, ನವೀನ್ ಮತ್ತಿತರರು ಕ್ರೀಡಾ ಜ್ಯೋತಿಯನ್ನು ಬೆಳಗಿಸುವುದರ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಪ್ರಾಧ್ಯಾಪಕರುಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಕುಮಾರಿ ದೀಪ ಸ್ವಾಗತಿಸಿದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪತ್ತೆಯಾದ ಬಂದೂಕು ಪ್ರಕರಣ ಮಧ್ಯಂತರ ತಡೆ ಮುಂದೂಡಿದ ಹೈಕೋರ್ಟ್

Suddi Udaya

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಶಹೀರ್ ಅನಸ್ ರವರಿಗೆ ಚಿನ್ನದ ಪದಕ

Suddi Udaya
error: Content is protected !!