24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

ನಾವೂರು: ನಾವೂರು ಗ್ರಾಮದ ಪುಳಿತ್ತಡಿ, ಕುದ್ರೋಳಿ ಪ್ರದೇಶದ ಮೂಲನಿವಾಸಿ ಮಲೆಕುಡಿಯ ಸಮುದಾಯದವರು ತಮ್ಮ ಪ್ರದೇಶಕ್ಕೆ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂಬ ಬೇಡಿಕೆಯನ್ನು ಮುಂದಿಟ್ಟು ಈ ಬಾರಿಯ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ನಿರ್ಧರಿಸಿ, ತಮ್ಮ ಪ್ರದೇಶದಲ್ಲಿ ಬ್ಯಾನರ್ ಅಳವಡಿಸಿದ್ದಾರೆ.


ಈ ಪರಿಸರದಲ್ಲಿ 22 ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬದವರಿದ್ದಾರೆ. ಸುಮಾರು ೧೦೦ಮಂದಿ ಮತದಾರರಿದ್ದಾರೆ. ದಶಕಗಳಿಂದ ಈ ಜನರು ತಮ್ಮ ಪ್ರದೇಶಕ್ಕೆ ರಸ್ತೆ ಹಾ ಗೂ ವಿದ್ಯುತ್ ಸಂಪರ್ಕ ಒದಗಿಸುವಂತೆ ನಿರಂತರ ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಆದರೆ ಕುದುರೇಮುಖ ರಾಷ್ಟ್ರೀಯ ಉದ್ಯಾನವದ ಒಳಗಿರುವ ಈ ಕುಟುಂಬಗಳಿಗೆ ಇನ್ನೂ ಯಾವುದೇ ಮೂಲಭೂತ ಸೌಲಭ್ಯಗಳು ಲಭಿಸಿಲ್ಲ. ತಮ್ಮ ಬೇಡಿಕೆಗಳ ಬಗ್ಗೆ ಗ್ರಾಮ ಪಂಚಾಯತಿನಿಂದ ಹಿಡಿದು ಪ್ರಧಾನಿಯವರೆಗೆ ಎಲ್ಲರಿಗೂ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.


ಇದರಿಂದ ಬೇಸತ್ತ ನಾವೂರು ಗ್ರಾಮದ ಅಲ್ಯ, ಪುಳಿತ್ತಡಿ, ಎರ್ಮಲೆ ಮಂಜಲ,ಕುದ್ರೋಳಿ, ಕಾಸರೋಳಿ ಪರಿಸರದ ಆದಿವಾಸಿ ಕುಟುಂಬಗಳು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೋಟಾ ಮತವನ್ನು ಚಲಾಯಿಸುವುದಾಗಿ ಬ್ಯಾನರ್ ಅಳವಡಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

Related posts

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ತಪಾಸಣಾ ಶಿಬಿರ

Suddi Udaya
error: Content is protected !!