25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

ನಾವೂರು: ನಾವೂರು ಗ್ರಾಮದ ಪುಳಿತ್ತಡಿ, ಕುದ್ರೋಳಿ ಪ್ರದೇಶದ ಮೂಲನಿವಾಸಿ ಮಲೆಕುಡಿಯ ಸಮುದಾಯದವರು ತಮ್ಮ ಪ್ರದೇಶಕ್ಕೆ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂಬ ಬೇಡಿಕೆಯನ್ನು ಮುಂದಿಟ್ಟು ಈ ಬಾರಿಯ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ನಿರ್ಧರಿಸಿ, ತಮ್ಮ ಪ್ರದೇಶದಲ್ಲಿ ಬ್ಯಾನರ್ ಅಳವಡಿಸಿದ್ದಾರೆ.


ಈ ಪರಿಸರದಲ್ಲಿ 22 ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬದವರಿದ್ದಾರೆ. ಸುಮಾರು ೧೦೦ಮಂದಿ ಮತದಾರರಿದ್ದಾರೆ. ದಶಕಗಳಿಂದ ಈ ಜನರು ತಮ್ಮ ಪ್ರದೇಶಕ್ಕೆ ರಸ್ತೆ ಹಾ ಗೂ ವಿದ್ಯುತ್ ಸಂಪರ್ಕ ಒದಗಿಸುವಂತೆ ನಿರಂತರ ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಆದರೆ ಕುದುರೇಮುಖ ರಾಷ್ಟ್ರೀಯ ಉದ್ಯಾನವದ ಒಳಗಿರುವ ಈ ಕುಟುಂಬಗಳಿಗೆ ಇನ್ನೂ ಯಾವುದೇ ಮೂಲಭೂತ ಸೌಲಭ್ಯಗಳು ಲಭಿಸಿಲ್ಲ. ತಮ್ಮ ಬೇಡಿಕೆಗಳ ಬಗ್ಗೆ ಗ್ರಾಮ ಪಂಚಾಯತಿನಿಂದ ಹಿಡಿದು ಪ್ರಧಾನಿಯವರೆಗೆ ಎಲ್ಲರಿಗೂ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.


ಇದರಿಂದ ಬೇಸತ್ತ ನಾವೂರು ಗ್ರಾಮದ ಅಲ್ಯ, ಪುಳಿತ್ತಡಿ, ಎರ್ಮಲೆ ಮಂಜಲ,ಕುದ್ರೋಳಿ, ಕಾಸರೋಳಿ ಪರಿಸರದ ಆದಿವಾಸಿ ಕುಟುಂಬಗಳು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೋಟಾ ಮತವನ್ನು ಚಲಾಯಿಸುವುದಾಗಿ ಬ್ಯಾನರ್ ಅಳವಡಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

Related posts

INICET ಪರೀಕ್ಷೆ : ಕೊಯ್ಯೂರಿನ ಡಾ. ರಿತೇಶ್ ಕುಮಾರ್ ರಿಗೆ 679ನೇ ರ್‍ಯಾಂಕ್

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು ಆದರ್ಶ ವಿದ್ಯಾಲಯ: ಡಾ. ಸುಬ್ರಹ್ಮಣ್ಯ ಭಟ್

Suddi Udaya
error: Content is protected !!