July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

ನಾವೂರು: ನಾವೂರು ಗ್ರಾಮದ ಪುಳಿತ್ತಡಿ, ಕುದ್ರೋಳಿ ಪ್ರದೇಶದ ಮೂಲನಿವಾಸಿ ಮಲೆಕುಡಿಯ ಸಮುದಾಯದವರು ತಮ್ಮ ಪ್ರದೇಶಕ್ಕೆ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂಬ ಬೇಡಿಕೆಯನ್ನು ಮುಂದಿಟ್ಟು ಈ ಬಾರಿಯ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ನಿರ್ಧರಿಸಿ, ತಮ್ಮ ಪ್ರದೇಶದಲ್ಲಿ ಬ್ಯಾನರ್ ಅಳವಡಿಸಿದ್ದಾರೆ.


ಈ ಪರಿಸರದಲ್ಲಿ 22 ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬದವರಿದ್ದಾರೆ. ಸುಮಾರು ೧೦೦ಮಂದಿ ಮತದಾರರಿದ್ದಾರೆ. ದಶಕಗಳಿಂದ ಈ ಜನರು ತಮ್ಮ ಪ್ರದೇಶಕ್ಕೆ ರಸ್ತೆ ಹಾ ಗೂ ವಿದ್ಯುತ್ ಸಂಪರ್ಕ ಒದಗಿಸುವಂತೆ ನಿರಂತರ ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಆದರೆ ಕುದುರೇಮುಖ ರಾಷ್ಟ್ರೀಯ ಉದ್ಯಾನವದ ಒಳಗಿರುವ ಈ ಕುಟುಂಬಗಳಿಗೆ ಇನ್ನೂ ಯಾವುದೇ ಮೂಲಭೂತ ಸೌಲಭ್ಯಗಳು ಲಭಿಸಿಲ್ಲ. ತಮ್ಮ ಬೇಡಿಕೆಗಳ ಬಗ್ಗೆ ಗ್ರಾಮ ಪಂಚಾಯತಿನಿಂದ ಹಿಡಿದು ಪ್ರಧಾನಿಯವರೆಗೆ ಎಲ್ಲರಿಗೂ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.


ಇದರಿಂದ ಬೇಸತ್ತ ನಾವೂರು ಗ್ರಾಮದ ಅಲ್ಯ, ಪುಳಿತ್ತಡಿ, ಎರ್ಮಲೆ ಮಂಜಲ,ಕುದ್ರೋಳಿ, ಕಾಸರೋಳಿ ಪರಿಸರದ ಆದಿವಾಸಿ ಕುಟುಂಬಗಳು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೋಟಾ ಮತವನ್ನು ಚಲಾಯಿಸುವುದಾಗಿ ಬ್ಯಾನರ್ ಅಳವಡಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

Related posts

ಹಿರಿಯ ದಲಿತ ಮುಖಂಡ ಎಂ.ದೇವದಾಸ್ ನಿಧನಕ್ಕೆ ಬೆಳ್ತಂಗಡಿ ದಲಿತ ಸಂಘರ್ಷ ಸಮಿತಿಯಿಂದ ಸಂತಾಪ

Suddi Udaya

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣ

Suddi Udaya

ಕುಕ್ಕೇಡಿ: ಸುಡುಮದ್ದು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಬಂಧನ: ಬಂಧಿತ ಮೂವರಿಗೂ ಫೆ.17ರವರೆಗೆ ನ್ಯಾಯಾಂಗ ಬಂಧನ

Suddi Udaya

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

Suddi Udaya
error: Content is protected !!