April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ರಸ್ತೆ ಬದಿ ಕಾಡಾನೆ ಕಂಡುಬಂದ ಘಟನೆ ಎ.23 ರಂದು ಬೆಳಿಗ್ಗೆ ನಡೆದಿದೆ.


ಮುಂಡಾಜೆಯಿಂದ ಕಕ್ಕಿಂಜೆ ಕಡೆ ತೆರಳುತ್ತಿದ್ದ ಬೈಕ್ ಮೆಕ್ಯಾನಿಕ್ ಒಬ್ಬರು ಬೆಳಿಗ್ಗೆ 9ಗಂಟೆ ಸಮಯ ಮುಂಡಾಜೆಯ ಕಾಪು ಬಳಿ ಹೆದ್ದಾರಿ ಬದಿಯ ಪೊದೆಯಲ್ಲಿ ನಿಂತುಕೊಂಡಿದ್ದ ಕಾಡಾನೆಯನ್ನು ಕಂಡಿದ್ದಾರೆ.
ಅವರು ತಕ್ಷಣ ಈ ವಿಚಾರವನ್ನು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದು ಚಿಬಿದ್ರೆ ವಿಭಾಗದ ಡಿ ಆರ್ ಎಫ್ ಒ ಭವಾನಿ ಶಂಕರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಕಾಡಾನೆ ರಸ್ತೆಯ ಇನ್ನೊಂದು ಬದಿ ಇರುವ ಅರಣ್ಯ ಇಲಾಖೆಯ ಹಳೆ ನರ್ಸರಿ ಮೂಲಕ ಪ್ರವೇಶಿಸಿ ಮೃತ್ಯುಂಜಯ ನದಿಯನ್ನು ದಾಟಿ ದುಂಬೆಟ್ಟು ಕಡೆ ಹೋಗಿರುವ ಗುರುತುಗಳು ಪತ್ತೆಯಾಗಿವೆ.
ಕಳೆದ ಎರಡು ದಿನಗಳ ಹಿಂದೆ ಪುದುವೆಟ್ಟು ಸಮೀಪ ರಾತ್ರಿ ಕಾರು ಚಾಲಕನಿಗೆ ಕಂಡುಬಂದಿದ್ದ ಕಾಡಾನೆ ಬಳಿಕ ನೇರ್ತನೆ, ಕಲ್ಮಂಜದಲ್ಲಿ ಸುಳಿದಾಡಿತ್ತು. ಅದೇ ಆನೆ ಮುಂಡಾಜೆಯಲ್ಲಿ ಕಂಡುಬಂದಿರುವ ಶಂಕೆ ವ್ಯಕ್ತವಾಗಿದೆ.

Related posts

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಹೈನುಗಾರಿಕೆ ತರಬೇತಿಯ ಸಮಾರೋಪ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಚಂಡಮಾರುತ ಸೂಚನೆ – ನಾಳೆ ಶಾಲಾ – ಪಿಯು ಕಾಲೇಜುಗಳಿಗೆ ರಜೆ

Suddi Udaya
error: Content is protected !!