24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ರಸ್ತೆ ಬದಿ ಕಾಡಾನೆ ಕಂಡುಬಂದ ಘಟನೆ ಎ.23 ರಂದು ಬೆಳಿಗ್ಗೆ ನಡೆದಿದೆ.


ಮುಂಡಾಜೆಯಿಂದ ಕಕ್ಕಿಂಜೆ ಕಡೆ ತೆರಳುತ್ತಿದ್ದ ಬೈಕ್ ಮೆಕ್ಯಾನಿಕ್ ಒಬ್ಬರು ಬೆಳಿಗ್ಗೆ 9ಗಂಟೆ ಸಮಯ ಮುಂಡಾಜೆಯ ಕಾಪು ಬಳಿ ಹೆದ್ದಾರಿ ಬದಿಯ ಪೊದೆಯಲ್ಲಿ ನಿಂತುಕೊಂಡಿದ್ದ ಕಾಡಾನೆಯನ್ನು ಕಂಡಿದ್ದಾರೆ.
ಅವರು ತಕ್ಷಣ ಈ ವಿಚಾರವನ್ನು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದು ಚಿಬಿದ್ರೆ ವಿಭಾಗದ ಡಿ ಆರ್ ಎಫ್ ಒ ಭವಾನಿ ಶಂಕರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಕಾಡಾನೆ ರಸ್ತೆಯ ಇನ್ನೊಂದು ಬದಿ ಇರುವ ಅರಣ್ಯ ಇಲಾಖೆಯ ಹಳೆ ನರ್ಸರಿ ಮೂಲಕ ಪ್ರವೇಶಿಸಿ ಮೃತ್ಯುಂಜಯ ನದಿಯನ್ನು ದಾಟಿ ದುಂಬೆಟ್ಟು ಕಡೆ ಹೋಗಿರುವ ಗುರುತುಗಳು ಪತ್ತೆಯಾಗಿವೆ.
ಕಳೆದ ಎರಡು ದಿನಗಳ ಹಿಂದೆ ಪುದುವೆಟ್ಟು ಸಮೀಪ ರಾತ್ರಿ ಕಾರು ಚಾಲಕನಿಗೆ ಕಂಡುಬಂದಿದ್ದ ಕಾಡಾನೆ ಬಳಿಕ ನೇರ್ತನೆ, ಕಲ್ಮಂಜದಲ್ಲಿ ಸುಳಿದಾಡಿತ್ತು. ಅದೇ ಆನೆ ಮುಂಡಾಜೆಯಲ್ಲಿ ಕಂಡುಬಂದಿರುವ ಶಂಕೆ ವ್ಯಕ್ತವಾಗಿದೆ.

Related posts

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

Suddi Udaya

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya
error: Content is protected !!