23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ರಸ್ತೆ ಬದಿ ಕಾಡಾನೆ ಕಂಡುಬಂದ ಘಟನೆ ಎ.23 ರಂದು ಬೆಳಿಗ್ಗೆ ನಡೆದಿದೆ.


ಮುಂಡಾಜೆಯಿಂದ ಕಕ್ಕಿಂಜೆ ಕಡೆ ತೆರಳುತ್ತಿದ್ದ ಬೈಕ್ ಮೆಕ್ಯಾನಿಕ್ ಒಬ್ಬರು ಬೆಳಿಗ್ಗೆ 9ಗಂಟೆ ಸಮಯ ಮುಂಡಾಜೆಯ ಕಾಪು ಬಳಿ ಹೆದ್ದಾರಿ ಬದಿಯ ಪೊದೆಯಲ್ಲಿ ನಿಂತುಕೊಂಡಿದ್ದ ಕಾಡಾನೆಯನ್ನು ಕಂಡಿದ್ದಾರೆ.
ಅವರು ತಕ್ಷಣ ಈ ವಿಚಾರವನ್ನು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದು ಚಿಬಿದ್ರೆ ವಿಭಾಗದ ಡಿ ಆರ್ ಎಫ್ ಒ ಭವಾನಿ ಶಂಕರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಕಾಡಾನೆ ರಸ್ತೆಯ ಇನ್ನೊಂದು ಬದಿ ಇರುವ ಅರಣ್ಯ ಇಲಾಖೆಯ ಹಳೆ ನರ್ಸರಿ ಮೂಲಕ ಪ್ರವೇಶಿಸಿ ಮೃತ್ಯುಂಜಯ ನದಿಯನ್ನು ದಾಟಿ ದುಂಬೆಟ್ಟು ಕಡೆ ಹೋಗಿರುವ ಗುರುತುಗಳು ಪತ್ತೆಯಾಗಿವೆ.
ಕಳೆದ ಎರಡು ದಿನಗಳ ಹಿಂದೆ ಪುದುವೆಟ್ಟು ಸಮೀಪ ರಾತ್ರಿ ಕಾರು ಚಾಲಕನಿಗೆ ಕಂಡುಬಂದಿದ್ದ ಕಾಡಾನೆ ಬಳಿಕ ನೇರ್ತನೆ, ಕಲ್ಮಂಜದಲ್ಲಿ ಸುಳಿದಾಡಿತ್ತು. ಅದೇ ಆನೆ ಮುಂಡಾಜೆಯಲ್ಲಿ ಕಂಡುಬಂದಿರುವ ಶಂಕೆ ವ್ಯಕ್ತವಾಗಿದೆ.

Related posts

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗ ಳ ಒಕ್ಕೂಬಂಗಾಡಿ: :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ಇದರ ಸಹಯೋಗ ದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya
error: Content is protected !!