23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ರಸ್ತೆ ಬದಿ ಕಾಡಾನೆ ಕಂಡುಬಂದ ಘಟನೆ ಎ.23 ರಂದು ಬೆಳಿಗ್ಗೆ ನಡೆದಿದೆ.


ಮುಂಡಾಜೆಯಿಂದ ಕಕ್ಕಿಂಜೆ ಕಡೆ ತೆರಳುತ್ತಿದ್ದ ಬೈಕ್ ಮೆಕ್ಯಾನಿಕ್ ಒಬ್ಬರು ಬೆಳಿಗ್ಗೆ 9ಗಂಟೆ ಸಮಯ ಮುಂಡಾಜೆಯ ಕಾಪು ಬಳಿ ಹೆದ್ದಾರಿ ಬದಿಯ ಪೊದೆಯಲ್ಲಿ ನಿಂತುಕೊಂಡಿದ್ದ ಕಾಡಾನೆಯನ್ನು ಕಂಡಿದ್ದಾರೆ.
ಅವರು ತಕ್ಷಣ ಈ ವಿಚಾರವನ್ನು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದು ಚಿಬಿದ್ರೆ ವಿಭಾಗದ ಡಿ ಆರ್ ಎಫ್ ಒ ಭವಾನಿ ಶಂಕರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಕಾಡಾನೆ ರಸ್ತೆಯ ಇನ್ನೊಂದು ಬದಿ ಇರುವ ಅರಣ್ಯ ಇಲಾಖೆಯ ಹಳೆ ನರ್ಸರಿ ಮೂಲಕ ಪ್ರವೇಶಿಸಿ ಮೃತ್ಯುಂಜಯ ನದಿಯನ್ನು ದಾಟಿ ದುಂಬೆಟ್ಟು ಕಡೆ ಹೋಗಿರುವ ಗುರುತುಗಳು ಪತ್ತೆಯಾಗಿವೆ.
ಕಳೆದ ಎರಡು ದಿನಗಳ ಹಿಂದೆ ಪುದುವೆಟ್ಟು ಸಮೀಪ ರಾತ್ರಿ ಕಾರು ಚಾಲಕನಿಗೆ ಕಂಡುಬಂದಿದ್ದ ಕಾಡಾನೆ ಬಳಿಕ ನೇರ್ತನೆ, ಕಲ್ಮಂಜದಲ್ಲಿ ಸುಳಿದಾಡಿತ್ತು. ಅದೇ ಆನೆ ಮುಂಡಾಜೆಯಲ್ಲಿ ಕಂಡುಬಂದಿರುವ ಶಂಕೆ ವ್ಯಕ್ತವಾಗಿದೆ.

Related posts

ಬಂಗಾಡಿ ಶ್ರೀ ವೀರಭದ್ರ ಭದ್ರಕಾಳಿ ಲಿಂಗತ್ಯಾರ್ ನಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ರವರನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸನ್ಮಾನ

Suddi Udaya

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!