22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ರಸ್ತೆ ಬದಿ ಕಾಡಾನೆ ಕಂಡುಬಂದ ಘಟನೆ ಎ.23 ರಂದು ಬೆಳಿಗ್ಗೆ ನಡೆದಿದೆ.


ಮುಂಡಾಜೆಯಿಂದ ಕಕ್ಕಿಂಜೆ ಕಡೆ ತೆರಳುತ್ತಿದ್ದ ಬೈಕ್ ಮೆಕ್ಯಾನಿಕ್ ಒಬ್ಬರು ಬೆಳಿಗ್ಗೆ 9ಗಂಟೆ ಸಮಯ ಮುಂಡಾಜೆಯ ಕಾಪು ಬಳಿ ಹೆದ್ದಾರಿ ಬದಿಯ ಪೊದೆಯಲ್ಲಿ ನಿಂತುಕೊಂಡಿದ್ದ ಕಾಡಾನೆಯನ್ನು ಕಂಡಿದ್ದಾರೆ.
ಅವರು ತಕ್ಷಣ ಈ ವಿಚಾರವನ್ನು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದು ಚಿಬಿದ್ರೆ ವಿಭಾಗದ ಡಿ ಆರ್ ಎಫ್ ಒ ಭವಾನಿ ಶಂಕರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಕಾಡಾನೆ ರಸ್ತೆಯ ಇನ್ನೊಂದು ಬದಿ ಇರುವ ಅರಣ್ಯ ಇಲಾಖೆಯ ಹಳೆ ನರ್ಸರಿ ಮೂಲಕ ಪ್ರವೇಶಿಸಿ ಮೃತ್ಯುಂಜಯ ನದಿಯನ್ನು ದಾಟಿ ದುಂಬೆಟ್ಟು ಕಡೆ ಹೋಗಿರುವ ಗುರುತುಗಳು ಪತ್ತೆಯಾಗಿವೆ.
ಕಳೆದ ಎರಡು ದಿನಗಳ ಹಿಂದೆ ಪುದುವೆಟ್ಟು ಸಮೀಪ ರಾತ್ರಿ ಕಾರು ಚಾಲಕನಿಗೆ ಕಂಡುಬಂದಿದ್ದ ಕಾಡಾನೆ ಬಳಿಕ ನೇರ್ತನೆ, ಕಲ್ಮಂಜದಲ್ಲಿ ಸುಳಿದಾಡಿತ್ತು. ಅದೇ ಆನೆ ಮುಂಡಾಜೆಯಲ್ಲಿ ಕಂಡುಬಂದಿರುವ ಶಂಕೆ ವ್ಯಕ್ತವಾಗಿದೆ.

Related posts

ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (ಕೆ.ಡಿ.ಸಿ) ನೂತನ ಆಡಳಿತ ಮಂಡಳಿ ರಚನೆ

Suddi Udaya

ಉಜಿರೆ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆಗೆ (ರಾಜ್ಯಪಠ್ಯಕ್ರಮ) ಶೇ. 100 ಫಲಿತಾಂಶ

Suddi Udaya

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

Suddi Udaya

ಮೊಗ್ರು: ನೈಮಾರ್, ಪರಾರಿ, ದoಬೆತ್ತಿಮಾರು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಕೃಷಿ ಹಾನಿ

Suddi Udaya

ಜೇಸಿಐ ಕೊಕ್ಕಡ ಕಪಿಲಾ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪುಂಜಾಲಕಟ್ಟೆ ಬಸವನಗುಡಿಯಲ್ಲಿ ಪಿವೈ ಟ್ರೇಡಿಂಗ್ ಟೈಲ್ಸ್,ಗ್ರಾನೈಟ್ ಹಾಗೂ ಸ್ಯಾನಿಟರಿ ಮಳಿಗೆ ಶುಭಾರಂಭ

Suddi Udaya
error: Content is protected !!