23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ರಸ್ತೆ ಬದಿ ಕಾಡಾನೆ ಕಂಡುಬಂದ ಘಟನೆ ಎ.23 ರಂದು ಬೆಳಿಗ್ಗೆ ನಡೆದಿದೆ.


ಮುಂಡಾಜೆಯಿಂದ ಕಕ್ಕಿಂಜೆ ಕಡೆ ತೆರಳುತ್ತಿದ್ದ ಬೈಕ್ ಮೆಕ್ಯಾನಿಕ್ ಒಬ್ಬರು ಬೆಳಿಗ್ಗೆ 9ಗಂಟೆ ಸಮಯ ಮುಂಡಾಜೆಯ ಕಾಪು ಬಳಿ ಹೆದ್ದಾರಿ ಬದಿಯ ಪೊದೆಯಲ್ಲಿ ನಿಂತುಕೊಂಡಿದ್ದ ಕಾಡಾನೆಯನ್ನು ಕಂಡಿದ್ದಾರೆ.
ಅವರು ತಕ್ಷಣ ಈ ವಿಚಾರವನ್ನು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದು ಚಿಬಿದ್ರೆ ವಿಭಾಗದ ಡಿ ಆರ್ ಎಫ್ ಒ ಭವಾನಿ ಶಂಕರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಕಾಡಾನೆ ರಸ್ತೆಯ ಇನ್ನೊಂದು ಬದಿ ಇರುವ ಅರಣ್ಯ ಇಲಾಖೆಯ ಹಳೆ ನರ್ಸರಿ ಮೂಲಕ ಪ್ರವೇಶಿಸಿ ಮೃತ್ಯುಂಜಯ ನದಿಯನ್ನು ದಾಟಿ ದುಂಬೆಟ್ಟು ಕಡೆ ಹೋಗಿರುವ ಗುರುತುಗಳು ಪತ್ತೆಯಾಗಿವೆ.
ಕಳೆದ ಎರಡು ದಿನಗಳ ಹಿಂದೆ ಪುದುವೆಟ್ಟು ಸಮೀಪ ರಾತ್ರಿ ಕಾರು ಚಾಲಕನಿಗೆ ಕಂಡುಬಂದಿದ್ದ ಕಾಡಾನೆ ಬಳಿಕ ನೇರ್ತನೆ, ಕಲ್ಮಂಜದಲ್ಲಿ ಸುಳಿದಾಡಿತ್ತು. ಅದೇ ಆನೆ ಮುಂಡಾಜೆಯಲ್ಲಿ ಕಂಡುಬಂದಿರುವ ಶಂಕೆ ವ್ಯಕ್ತವಾಗಿದೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅ.19: ಉಜಿರೆ ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ”

Suddi Udaya

ಬೆಳ್ತಂಗಡಿ : ಮಕ್ಕಳ ಹಕ್ಕುಗಳ ಮಾಸೋತ್ಸವ ಉದ್ಘಾಟನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಹೊರೆ ಕಾಣಿಕೆ ಹಾಗೂ ಪಲ್ಲಕ್ಕಿ ಸಮರ್ಪಣೆ

Suddi Udaya
error: Content is protected !!