22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಈ ಬಾರಿಯ ಲೋಕಸಭಾ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧಾರ ಮಾಡುವ ನಿರ್ಣಾಯಕವಾದಂತಹ ಚುನಾವಣೆ: ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ : ಈ ಬಾರಿಯ ಲೋಕಸಭಾ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧಾರ ಮಾಡುವ ನಿರ್ಣಾಯಕವಾದಂತಹ ಚುನಾವಣೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹೇಳಿದರು.

ಇವರು ಏ.23ರಂದು ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಕೇಂದ್ರದಲ್ಲಿ ಸ್ಥಿರವಾದಂತಹ ಸರ್ಕಾರ, ಜೊತೆಗೆ ಗಟ್ಟಿಯಾದ ನಾಯಕತ್ವ ಇದ್ದಾಗ ದೇಶ ಯಾವ ರೀತಿಯಲ್ಲಿ ಪ್ರಗತಿಯನ್ನು ಸಾಧಿಸಬಹುದು, ಗಟ್ಟಿಯಾದಂತ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕೆ ಸಾಧ್ಯ ಎನ್ನುವಂತಹದನ್ನು ಹತ್ತು ವರ್ಷದಲ್ಲಿ ಜಗತ್ತಿಗೆ ಹಾಗೂ ಭಾರತಕ್ಕೆ ತೋರಿಸಿಕೊಟ್ಟಿದೆ. ಈ ಬಾರಿ ಬಿಜೆಪಿ ತನ್ನ ಕೆಲಸದ ಮೇಲೆ, ಅಭಿವೃದ್ಧಿಯ ಆಧಾರದ ಮೇಲೆ ಕಳೆದ ಎಲ್ಲಾ ದಾಖಲೆಗಳನ್ನು ಮೀರಿ 400 ರ ಗಡಿಯನ್ನು ಗೆಲ್ಲುವ ನಿಶ್ಚಿಯ ಗುರಿಯೊಂದಿಗೆ ಹೆಜ್ಜೆ ಇಡುತ್ತಿದ್ದರೆ, ಕಾಂಗ್ರೆಸ್ 40 ರ ಗಡಿಯನ್ನು ದಾಟುವುದಕಕ್ಕೆ ಪ್ರಯತ್ನ ಪಡಬೇಕಾದಂತಹ ಸ್ಥಿತಿಗೆ ಕಾಂಗ್ರೆಸ್ ತಲುಪಿದೆ. ಹಾಗಾಗಿ ಕಾಂಗ್ರೆಸ್ ಕೇಂದ್ರದಲ್ಲಿ ಸ್ಥಿರ ಸರ್ಕಾರ ಕೊಡುತ್ತದೆ ಎನ್ನುವುದು ಮರೀಚಿಕೆ ಮಾತ್ರ.

ತಮಿಳುನಾಡು, ಕೇರಳದಲ್ಲಿ ಅಭೂತಪೂರ್ವವಾದ ಬೆಂಬಲ ಸಿಗುತ್ತಿದೆ. ದಕ್ಷಿಣ ಭಾರತದಲ್ಲಿ ಎಲ್ಲಾ ಭಾಗದಲ್ಲೂ ಬಿಜೆಪಿ ಗಟ್ಟಿಯಾಗುತ್ತಿದೆ. ಸ್ಥಿರ ಸರ್ಕಾರ ಮತ್ತು ಆರ್ಥಿಕ ಪ್ರಗತಿಗೂ ಸಂಬಂಧವಿದೆ. 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನದಲ್ಲಿದೆ. ದೇಶ ಪ್ರಗತಿಗೆ ಹೋಗುತ್ತಿದೆ ಎಂಬುವುದು ಜನರಿಗೆ ವಿಶ್ವಾಸ ಬಂದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಏನಾಗುತ್ತದೆ ಎಂಬುವುದು 11 ತಿಂಗಳಲ್ಲಿ ರಾಜ್ಯ ಸರ್ಕಾರವನ್ನು ನೋಡಿದಾಗ ಗೊತ್ತಾಗುತ್ತದೆ. ಬದುಕಿಗೆ ವಿಶ್ವಾಸ ಕೊಡಬಲ್ಲ ಕೇಂದ್ರದ 500ಕ್ಕೂ ಮಿಕ್ಕಿದ ಯೋಜನೆಗಳು ಜನ ಸಾಮಾನ್ಯರಲ್ಲಿ ವಿಶ್ವಾಸವನ್ನು ತುಂಬಿಸಿದೆ. ದೇಶ ಪ್ರಗತಿಗೆ ಸಾಗುತ್ತಿದೆ ಎಂಬುವುದು ಜನರಿಗೆ ನಂಬಿಕೆ ಇದೆ. ಆರ್ಥಿಕ ಪ್ರಗತಿಗೆ ಸ್ಥಿರ ಸರ್ಕಾರ ಅಗತ್ಯವಿದೆ, ಈ ಸ್ಥಿರ ಸರ್ಕಾರವನ್ನು ಕೊಡುವುದಕ್ಕೆ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ಉಪಸ್ಥಿತರಿದ್ದರು.

ರಾಜೇಶ್ ಪೆರ್ಮುಡ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕನ್ಯಾಡಿ ಶ್ರೀಗಳಿಂದ ರವೀಂದ್ರ ಪೂಜಾರಿ ಆರ್ಲರಿಗೆ ಗೌರವಾರ್ಪಣೆ

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Suddi Udaya

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

Suddi Udaya

ಪಟ್ರಮೆ: ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ವ್ಯತ್ಯಯ

Suddi Udaya
error: Content is protected !!