July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

ಸುಲ್ಕೇರಿ :ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟ ಇದರ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಎಂಬ ವಿಶೇಷ ಕಾರ್ಯಕ್ರಮವನ್ನು ಸುಲ್ಕೇರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಲ್ಕೇರಿ ಒಕ್ಕೂಟದ ಉಪಾಧ್ಯಕ್ಷೆ ಶ್ರೀಮತಿ ವಸಂತಿ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಮೇಲ್ವಿಚಾರಕರಾದ ಶ್ರೀಮತಿ ದಮಯಂತಿ, ಸೇವಪ್ರತಿನಿಧಿ ಶ್ರೀಮತಿ ಮಮತಾ ,ಜನಜಾಗೃತಿ ವೇದಿಕೆಯ ಸದಸ್ಯ ಸದಾನಂದ ಗೌಡ ,ಒಕ್ಕೂಟದ ಕಾರ್ಯದರ್ಶಿ ಮತ್ತು ಜೊತೆ ಕಾರ್ಯದರ್ಶಿ ಉಪಸ್ಥಿತರಿದ್ದರು.

ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಚೈತ್ರಾ, ಪ್ರಿಯಾ ಹಾಗೂ ಆದರ್ಶ್ ಜಲಸಂರಕ್ಷಣೆಯ ಕುರಿತು ಮಾಹಿತಿ ನೀಡಿದ ಇವರು ಜೀವ ಸಂಕುಲದ ಉಗಮ, ಅಸ್ತಿತ್ವ ಮತ್ತು ಬೆಳವಣಿಗೆಗೆ ಕಾರಣವಾಗಿರುವ ನೀರನ್ನು ಸಮರ್ಪಕವಾಗಿ ನಿರ್ವಹಿಸುವುದರ ಮೂಲಕ ಹೇಗೆ ಸಂರಕ್ಷಿಸಬಹುದು ಹಾಗೂ ನೀರಿನ ಸಮರ್ಪಕ ನಿರ್ವಹಣೆಯ ವಿಧಾನವನ್ನು ತಿಳಿಸಿದರು.
ಕು| ಪ್ರಿಯ ಸ್ವಾಗತಿಸಿ ,ಆದರ್ಶ್ ವಂದಿಸಿದರು. ಶ್ರೀಮತಿ ಪುಷ್ಪ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ ಸಹಕಾರ ಸಂಘದ ಚಾರ್ಮಾಡಿ ಪೂರ್ಣಾವಧಿ ಶಾಖೆಯ ಉದ್ಘಾಟನೆ ಸಮಾರಂಭ

Suddi Udaya

ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಕು. ರಕ್ಷಾ ಶೆಣೈರವರಿಗೆ ಉತ್ತಮ ಶ್ರೇಣಿ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ನಿಡ್ಲೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya
error: Content is protected !!