25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

ಗುರುವಾಯನಕೆರೆ: ವಿಜ್ಞಾನ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಗಳಲ್ಲಿ ವಿಶೇಷ ಸಾಧನೆ ಮಾಡಿ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಹತ್ತನೆಯ ತರಗತಿಯ ತನಕ ಸರಕಾರಿ ಶಾಲೆಯಲ್ಲಿ ಓದಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ತೀರ್ಮಾನಿಸಿದೆ.


ಗ್ರಾಮೀಣ ಪ್ರದೇಶದ, ಅವಕಾಶ ವಂಚಿತ ವಿದ್ಯಾರ್ಥಿಗಳ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಕನಸು ನನಸು ಮಾಡಲು ಯೋಗ್ಯ ನೀಟ್ ಮತ್ತು ಜೆ ಇ ಇ/ ಸಿ ಇ ಟಿ ಕೋಚಿಂಗ್ ನೀಡಲು ತೀರ್ಮಾನಿಸಲಾಗಿದೆ. ರಾಷ್ಟ್ರಮಟ್ಟದ ಉನ್ನತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಾದ AIIMS, ರಾಷ್ಟ್ರ ಮಟ್ಟದ ಉನ್ನತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ IIT, NIIT ಗಳ ಪ್ರವೇಶಾತಿ ಪರೀಕ್ಷೆಗಳಿಗೆ ತರಬೇತು ಗೊಳಿಸಿ ವಿದ್ಯಾರ್ಥಿಗಳ ಕನಸನ್ನು ನನಸು ಮಾಡಲು ಎಕ್ಸೆಲ್ ಪದವಿಪೂರ್ವ ಕಾಲೇಜು ಅಣಿಗೊಂಡಿದೆ.

ಅದೇ ರೀತಿ ವಾಣಿಜ್ಯ ವಿಭಾಗದಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗಲು ಸಿ. ಎ ಫೌಂಡೇಶನ್ ಕೋರ್ಸ್, ಕಂಪನಿ ಸೆಕ್ರೆಟರಿ ಹುದ್ದೆಗಾಗಿ ಸಿ. ಎಸ್ ಫೌಂಡೇಶನ್ ಹಾಗೂ ರಾಷ್ಟ್ರ ಮಟ್ಟದ ಕಾನೂನು ಪದವಿ ಪ್ರವೇಶಕ್ಕಾಗಿ ಕ್ಲಾಟ್ ಕೋಚಿಂಗ್ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9880899769, 9902284110 ಸಂಪರ್ಕಿಸಬಹುದು ಎಂದು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya

ಕಾರಿಂಜ ಶ್ರೀ ವನಶಾಸ್ತರ ಶ್ರೀ ವೀರಭದ್ರ ದೇವಸ್ಥಾನ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Suddi Udaya

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!