26.7 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

ನಿಟ್ಟಡೆ :ಇಲ್ಲಿಯ ಪೆರ್ಮುಡ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ, ನದಿಯಿಂದ ಮರಳನ್ನು ಕಳವು ಮಾಡಿ, ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡ ಘಟನೆ ಎ.22ರಂದು ನಡೆದಿದೆ.

ಎ. 22ರಂದು ಮಧ್ಯಾಹ್ನ, ಬೆಳ್ತಂಗಡಿ ತಾಲೂಕು ನಿಟ್ಟಡೆ ಗ್ರಾಮದ ಪೆರ್ಮುಡ ಎಂಬಲ್ಲಿ, ಪಿಕ್‌ ಆಪ್‌ ವಾಹನ ನಂಬ್ರ ಕೆಎ 19 ಡಿ 8597 ನೇದರಲ್ಲಿ ಆರೋಪಿತನಾದ ಮೂಡುಕೋಡಿ ನಿವಾಸಿ ಮಹಮ್ಮದ್ ನೌಶಾದ್ (21) ಎಂಬಾತನು, ಯಾವುದೇ ಪರವಾನಿಗೆ ಇಲ್ಲದೇ, ಎಲ್ಲಿಂದಲೋ ನದಿಯಿಂದ ಮರಳನ್ನು ಕಳವು ಮಾಡಿ, ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿದ ಶ್ರೀಶೈಲ್‌ ಡಿ ಮುರಗೋಡ್‌ ಪಿಎಸ್‌ಐ (ಕಾ.ಸು) ವೇಣೂರು ಪೊಲೀಸ್ ಠಾಣೆರವರು ಹಾಗೂ ಸಿಬ್ಬಂದಿಗಳು, ಸದ್ರಿ ವಾಹನವನ್ನು ಸ್ವಾಧೀನಪಡಿಸಿಕೊಂಡು ವೇಣೂರು ಪೊಲೀಸ್ ಠಾಣೆಯಲ್ಲಿ ಅಕ್ರ 40/2024 ಕಲಂ 379 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ಪ. ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

Suddi Udaya
error: Content is protected !!