July 23, 2026
Uncategorized

ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ಉಜಿರೆಯಲ್ಲಿ ನಡೆದ ರೋಡ್ ಶೋ ನ ಯಶಸ್ಸಿನ ಕುರಿತು ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಗೌಡ ಪುದುವೆಟ್ಟು ಅವರಿಗೆ ಕರೆ ಮಾಡಿ ಅಭಿನಂದಿಸಿದರು.

ವಿಜೇಯಂದ್ರರವರು ಕರೆ ಮೂಲಕ ಮಾತನಾಡಿ ಉಜಿರೆಯಲ್ಲಿ ನಡೆದ ರೋಡ್ ಶೋ ಕಾರ್ಯಕ್ರಮ ತುಂಬಾ ಅದ್ಬುತವಾಗಿತ್ತು. ನಮ್ಮ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಎರಡೂವರೆ ತಾಸುವಿನಿಂದ ತಾಯಂದಿರು ಕಾಯುತ್ತಿದ್ದರು ಮುಖದಲ್ಲಿ ಸಂತೋಷ ಕಾಣುತ್ತಿತ್ತು. ಲೋಕಸಭಾ ಚುನಾವಣೆಯ ದೃಷ್ಟಿಯಿಂದ 2019 ರ ಚುನಾವಣೆಗಿಂತ ಈ ಬಾರಿ ಪ್ರತಿ ಬೂತ್ ನಲ್ಲಿ 150 ಮತಗಳು ಹೆಚ್ಚಾಗಬೇಕು. ನಾವು ಗೆದ್ದೆ ಗೆಲ್ಲುತ್ತೇವೆ ಅದರಲ್ಲಿ ಪ್ರಶ್ನೆಯಿಲ್ಲ. ಆದರೆ ಎಷ್ಟು ಮತಗಳ‌ ಅಂತರದಿಂದ ಗೆಲ್ಲುತ್ತೇವೆ ಎಂಬುದು ಮುಖ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿಜೀಯವರ ಆಡಳಿತ, ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಿಳಿಸುವ ಪ್ರಯತ್ನವಾಗಬೇಕೆಂದು ತಿಳಿಸಿದರು.

ಯಶವಂತ್ ಡೆಚ್ಚಾರ್ ರವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಕಾರ್ಯಕರ್ತರಿಗೆ ಉತ್ತಮ ಸಪೋರ್ಟ್ ಮಾಡುತ್ತಿದ್ದಾರೆ. ಬೆಳ್ತಂಗಡಿ ತುಂಬಾ ಅಭಿವೃದ್ಧಿಯಾಗಿದೆ ಎಂದರು.

Related posts

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

Suddi Udaya

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಕನ್ಯಾಡಿ ಬ್ರಹ್ಮಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya
error: Content is protected !!