25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ಉಜಿರೆಯಲ್ಲಿ ನಡೆದ ರೋಡ್ ಶೋ ನ ಯಶಸ್ಸಿನ ಕುರಿತು ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಗೌಡ ಪುದುವೆಟ್ಟು ಅವರಿಗೆ ಕರೆ ಮಾಡಿ ಅಭಿನಂದಿಸಿದರು.

ವಿಜೇಯಂದ್ರರವರು ಕರೆ ಮೂಲಕ ಮಾತನಾಡಿ ಉಜಿರೆಯಲ್ಲಿ ನಡೆದ ರೋಡ್ ಶೋ ಕಾರ್ಯಕ್ರಮ ತುಂಬಾ ಅದ್ಬುತವಾಗಿತ್ತು. ನಮ್ಮ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು. ಎರಡೂವರೆ ತಾಸುವಿನಿಂದ ತಾಯಂದಿರು ಕಾಯುತ್ತಿದ್ದರು ಮುಖದಲ್ಲಿ ಸಂತೋಷ ಕಾಣುತ್ತಿತ್ತು. ಲೋಕಸಭಾ ಚುನಾವಣೆಯ ದೃಷ್ಟಿಯಿಂದ 2019 ರ ಚುನಾವಣೆಗಿಂತ ಈ ಬಾರಿ ಪ್ರತಿ ಬೂತ್ ನಲ್ಲಿ 150 ಮತಗಳು ಹೆಚ್ಚಾಗಬೇಕು. ನಾವು ಗೆದ್ದೆ ಗೆಲ್ಲುತ್ತೇವೆ ಅದರಲ್ಲಿ ಪ್ರಶ್ನೆಯಿಲ್ಲ. ಆದರೆ ಎಷ್ಟು ಮತಗಳ‌ ಅಂತರದಿಂದ ಗೆಲ್ಲುತ್ತೇವೆ ಎಂಬುದು ಮುಖ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿಜೀಯವರ ಆಡಳಿತ, ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಿಳಿಸುವ ಪ್ರಯತ್ನವಾಗಬೇಕೆಂದು ತಿಳಿಸಿದರು.

ಯಶವಂತ್ ಡೆಚ್ಚಾರ್ ರವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಕಾರ್ಯಕರ್ತರಿಗೆ ಉತ್ತಮ ಸಪೋರ್ಟ್ ಮಾಡುತ್ತಿದ್ದಾರೆ. ಬೆಳ್ತಂಗಡಿ ತುಂಬಾ ಅಭಿವೃದ್ಧಿಯಾಗಿದೆ ಎಂದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಬೆಳ್ತಂಗಡಿ : ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ ಎಮ್.ಡಿ

Suddi Udaya

ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿಯಿಂದ ಸಮಾಜ ಮುಖಿ ಕಾರ್ಯ: ಕರಂಬಾರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಹಸ್ತಾಂತರ

Suddi Udaya

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್ ಗಳಿಗೆ ಉಪಕರಣಗಳನ್ನು ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಮನವಿ

Suddi Udaya
error: Content is protected !!