July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

ನಾವೂರು: ನಾವೂರು ಗ್ರಾಮದ ಪುಳಿತ್ತಡಿ, ಕುದ್ರೋಳಿ ಪ್ರದೇಶದ ಮೂಲನಿವಾಸಿ ಮಲೆಕುಡಿಯ ಸಮುದಾಯದವರು ತಮ್ಮ ಪ್ರದೇಶಕ್ಕೆ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂಬ ಬೇಡಿಕೆಯನ್ನು ಮುಂದಿಟ್ಟು ಈ ಬಾರಿಯ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ನಿರ್ಧರಿಸಿ, ತಮ್ಮ ಪ್ರದೇಶದಲ್ಲಿ ಬ್ಯಾನರ್ ಅಳವಡಿಸಿದ್ದಾರೆ.


ಈ ಪರಿಸರದಲ್ಲಿ 22 ಆದಿವಾಸಿ ಮಲೆಕುಡಿಯ ಸಮುದಾಯದ ಕುಟುಂಬದವರಿದ್ದಾರೆ. ಸುಮಾರು ೧೦೦ಮಂದಿ ಮತದಾರರಿದ್ದಾರೆ. ದಶಕಗಳಿಂದ ಈ ಜನರು ತಮ್ಮ ಪ್ರದೇಶಕ್ಕೆ ರಸ್ತೆ ಹಾ ಗೂ ವಿದ್ಯುತ್ ಸಂಪರ್ಕ ಒದಗಿಸುವಂತೆ ನಿರಂತರ ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಆದರೆ ಕುದುರೇಮುಖ ರಾಷ್ಟ್ರೀಯ ಉದ್ಯಾನವದ ಒಳಗಿರುವ ಈ ಕುಟುಂಬಗಳಿಗೆ ಇನ್ನೂ ಯಾವುದೇ ಮೂಲಭೂತ ಸೌಲಭ್ಯಗಳು ಲಭಿಸಿಲ್ಲ. ತಮ್ಮ ಬೇಡಿಕೆಗಳ ಬಗ್ಗೆ ಗ್ರಾಮ ಪಂಚಾಯತಿನಿಂದ ಹಿಡಿದು ಪ್ರಧಾನಿಯವರೆಗೆ ಎಲ್ಲರಿಗೂ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.


ಇದರಿಂದ ಬೇಸತ್ತ ನಾವೂರು ಗ್ರಾಮದ ಅಲ್ಯ, ಪುಳಿತ್ತಡಿ, ಎರ್ಮಲೆ ಮಂಜಲ,ಕುದ್ರೋಳಿ, ಕಾಸರೋಳಿ ಪರಿಸರದ ಆದಿವಾಸಿ ಕುಟುಂಬಗಳು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೋಟಾ ಮತವನ್ನು ಚಲಾಯಿಸುವುದಾಗಿ ಬ್ಯಾನರ್ ಅಳವಡಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ಬಳಂಜ ಸ.ಉ.ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೈಗಾರಿಕೋದ್ಯಮಿ ಕೃಷ್ಣ ಸಂಪಿಗೆತ್ತಾಯ ಭೇಟಿ

Suddi Udaya

ಬಳಂಜ : ಸರ್ವೋದಯ ಫ್ರೆಂಡ್ಸ್ ಹಾಗೂ ಅಟ್ಲಾಜೆ ಸ.ಕಿ.ಪ್ರಾ. ಶಾಲೆಯ ಸಹಭಾಗಿತ್ವದಲ್ಲಿ ಕ್ರಿಕೆಟ್ ಪಂದ್ಯಾಟ

Suddi Udaya

ನಿರಂಜನ್ ಬಾವಂತಬೆಟ್ಟು ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸಿರಿ ಸಿಬ್ಬಂದಿಗಳಿಂದ ಶುಭಾಶಯ

Suddi Udaya
error: Content is protected !!