22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಜಿರೆ ಬಳಿ ಎ.24 ರ ಮಧ್ಯಾಹ್ನ ಸಂಭವಿಸಿದೆ.

ಉಜಿರೆ ಚಾರ್ಮಾಡಿ ರಸ್ತೆಯ ಅಜಿತ್ ನಗರ ಕ್ರಾಸ್ ಬಳಿ ವ್ಯಕ್ತಿಯೊಬ್ಬರು ರಸ್ತೆ ಬದಿಯ ಚರಂಡಿಯ ಸ್ಲ್ಯಾಬ್ ಮೇಲೆ ಕುಳಿತಿದ್ದ ಸುಮಾರು 35-40 ವರ್ಷದ ವ್ಯಕ್ತಿ ಅಲ್ಲೆ ರಸ್ತೆಗೆ ಉರುಳಿ ಬಿದ್ದು ಸಾವನ್ನಪ್ಪಿದ್ದು ಇದನ್ನು ಗಮನಿಸಿದ ಸ್ಥಳೀಯರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು  ಪರಿಶೀಲನೆ ನಡೆಸಿ‌ದ್ದಾರೆ. ಮೃತ ದೇಹ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಶವಗಾರಕ್ಕೆ ಕಳುಹಿಸಿಕೊಡಲಾಗಿದೆ.

ಮೃತ ವ್ಯಕ್ತಿ ಅಪರಿಚಿತನಂತೆ ಕಾಣುತಿದ್ದು ಧರ್ಮಸ್ಥಳ ವಿಪತ್ತು ತಂಡದ ಸದಸ್ಯರು ಹಾಗೂ ಸ್ಥಳೀಯರು ಪೊಲೀಸರಿಗೆ ಸಹಕಾರ ನೀಡಿದ್ದಾರೆ.

ಅಪರಿಚಿತ ಗಂಡಸಿನ ಮೃತದೇಹದ ವಾರಸುದಾರರ ಪತ್ತೆಗೆ ಸಹಕರಿಸುವಂತೆ ಪೊಲೀಸರು ವಿನಂತಿಸಿದ್ದಾರೆ.

Related posts

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ಜು.1: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ನಿಡ್ಲೆ ಆಯುಷ್ಮಾನ್ ಉಪ ಆರೋಗ್ಯ ಕೇಂದ್ರ ರಾಷ್ಟ್ರಮಟ್ಟದಲ್ಲಿ ಆಯ್ಕೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಆಶಾ ಅಡೂರು, ಬೆಳ್ತಂಗಡಿ ನೇಮಕ .

Suddi Udaya

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!