23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

ಉರುವಾಲು: ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವದ ನೇಮೋತ್ಸವವು ಎ.24ರಿಂದ ಪ್ರಾರಂಭಗೊಂಡು 25ರವರೆಗೆ ನಡೆಯಲಿದೆ.

ಇಂದು ಬೆಳಗ್ಗೆ ಪ್ರಾರ್ಥನೆ, ತೋರಣಮೂಹೂರ್ತ, ಸ್ವಸ್ತಿ ಪುಣ್ಯಾಹ, ಗಣಯಾಗ, ಪಂಚಾಮೃತ ಅಭಿಷೇಕ, ಏಕಾದಶ ರುದ್ರಪಾರಾಯಣ ಸಹಿತ ಅಭಿಷೇಕ, ನವಕ ಕಲಶಾಭಿಷೇಕ ಪ್ರಧಾನ ಹೋಮ, ಮಹಾಪೂಜೆ, ಪ್ರಸಾದ ವಿತರಣೆ, ಹಾಗೂ ದೇವಸ್ಥಾನದ ಬಳಿ ಹೊರೆಕಾಣಿಕೆ ಸ್ವೀಕಾರ, ಅನ್ನಸಂತರ್ಪಣೆ ನಡೆಯಿತು.

ಸೂರ್ಯೋದಯದಿಂದ ಸೂರ್ಯಾಸ್ತದ ತನಕ ಅರ್ಧ ಏಕಾಹಃ ಭಜನಾ ಕಾರ್ಯಕ್ರಮ ನಡೆಯಲಿದ್ದು ಇದರ ಉದ್ಘಾಟನೆಯನ್ನು ಮಾರುತಿಪುರ ರೈತ ಬಂಧು ಮಾಲಕರು ಶಿವಶಂಕರ ನಾಯಕ್ ನೆರವೇರಿಸಿದರು.. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ರಾತ್ರಿ ಗಂಟೆ 6-00 ರಿಂದ ಶ್ರೀ ರಂಗಪೂಜೆ, ಪ್ರಾರ್ಥನೆ, ದೈವಕ್ಕೆ ಪರ್ವ ಸೇವೆ, ರಾತ್ರಿ 8-00 ರಿಂದ ದೇವರ ಬಲಿ ಉತ್ಸವ, ಕಟ್ಟೆಪೂಜೆ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ., ಅನ್ನಸಂತರ್ಪಣೆ, ರಾತ್ರಿ ಗಂಟೆ 10-00ಕ್ಕೆ ಶ್ರೀ ವ್ಯಾಘ್ರಚಾಮುಂಡಿ ದೈವದ ನೇಮೋತ್ಸವ ನಡೆಯಲಿದೆ.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಾಂಡ್ ಫೇಸ್ಟ್ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಕೂಪನ್ ಬಿಡುಗಡೆ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಹುಟ್ಟುಹಬ್ಬ ; ಶಿವಮೊಗ್ಗದಲ್ಲಿ ಭೇಟಿ ಮಾಡಿ ಶುಭಾಶಯ ತಿಳಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!