ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಪ್ರಚಾರದ ಕರಪತ್ರದಲ್ಲಿ ಕಟೀಲು ಯಕ್ಷಗಾನ ಮೇಳದ ಕಲಾವಿದರೊಬ್ಬರ ವೇಷದ ಚಿತ್ರ ಪ್ರಕಟಗೊಂಡಿದ್ದು, ಅದರ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ. ಕಲಾವಿದ ಗಣೇಶ್ ಶೆಟ್ಟಿ ಕನ್ನಡಿಕಟ್ಟೆ ಅವರು ತನ್ನ ಅನುಮತಿಯಿಲ್ಲದೆ ಭಾವಚಿತ್ರ ಪ್ರಕಟಿಸಿದ್ದಾರೆಂದು ಜಿಲ್ಲಾ ಚುನಾವಣಾಧಿಕಾರಿಗೆ ನೀಡಿದ್ದಾರೆ.

ನಾನು ಯಾವುದೇ ಪಕ್ಷದ ಪ್ರತಿನಿಧಿಯಾಗಿರುವುದಿಲ್ಲ. ಯಾವುದೇ ಪಕ್ಷದ ಪರವೂ ಪ್ರಚಾರ ಮಾಡಿರುವುದಿಲ್ಲ, ಕಾಂಗ್ರೆಸ್ ಪಕ್ಷದ ಕರಪತ್ರದಲ್ಲಿ ನನ್ನ ಭಾವಚಿತ್ರ ಅನುಮತಿಯಿಲ್ಲದೆ ಪ್ರಕಟಗೊಂಡಿದ್ದು ಭಾವಚಿತ್ರವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.

Leave a Comment

error: Content is protected !!