July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

ನಡ ಗ್ರಾಮದ ಕುತ್ರೊಟ್ಟು ನಿವಾಸಿ ಫಯಾಜ್ , ಲಾಯಿಲ ಕಕ್ಕೇನದ ಮಹಿಳೆಯೊಂದಿಗೆ ನಾಪತ್ತೆಯಾಗಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿ, ಫಯಾಜ್ ನ ಪತ್ನಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಎ.23 ರಂದು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ನಡ ಗ್ರಾಮದ ಕುತ್ರೊಟ್ಟು ನಿವಾಸಿ ಶ್ರೀಮತಿ ಮರಿಯಮ್ಮ ರವರು ನೀಡಿದ ದೂರಿನಂತೆ ಮರಿಯಮ್ಮ ರವರ ಪತಿ ಫಯಾಜ್ ಎ. 22 ರಂದು ಬೆಳ್ಳಿಗ್ಗೆ 6.30 ಗಂಟೆಗೆ ಮನೆಯಿಂದ ರಿಕ್ಷಾದಲ್ಲಿ ಬಾಡಿಗೆಗೆ ಎಂದು ಹೋದವರು, ಲಾಯಿಲದ ಕಕ್ಕೇನಕ್ಕೆ ಹೋಗಿ
ರಿಕ್ಷಾದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಈಗ ಇಬ್ಬರ ಮೊಬೈಲ್‌ ಸ್ವೀಚ್‌ ಆಫ್‌ ಆಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಅವರು ಬರಬಹುದು ಎಂದು ಈ ತನಕ ಕಾದು ತಡವಾಗಿ ದೂರು ನೀಡುತ್ತಿದ್ದು ಲಾಯಿಲ ಕಕ್ಕೇನದ ಮಹಿಳೆಯ ಜೊತೆ ಕಾಣೆಯಾಗಿರುವ ಫಯಾಜ್‌ ಪತ್ತೆ ಹಚ್ಚಿ ಕೊಡಬೇಕಾಗಿ ದೂರಿನಲ್ಲಿ ವಿನಂತಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಮುಂಡಾಜೆ ಪ.ಪೂ. ಕಾಲೇಜಿಗೆ ಶೇ.96.15 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು

Suddi Udaya

ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಜಯಪ್ರಸಾದ್ ಶೆಟ್ಟಿಗಾರ್ ಆಯ್ಕೆ

Suddi Udaya

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ- 5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

Suddi Udaya

ಬೆಳ್ತಂಗಡಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಬೆಂಗಳೂರು ಬ್ಯಾರಿ ಜಮಾಅತ್ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಸವಾದ್ ಮುಹಮ್ಮದ್ ಕುಂಞ ಉಜಿರೆ

Suddi Udaya
error: Content is protected !!