September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

ನಡ ಗ್ರಾಮದ ಕುತ್ರೊಟ್ಟು ನಿವಾಸಿ ಫಯಾಜ್ , ಲಾಯಿಲ ಕಕ್ಕೇನದ ಮಹಿಳೆಯೊಂದಿಗೆ ನಾಪತ್ತೆಯಾಗಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿ, ಫಯಾಜ್ ನ ಪತ್ನಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಎ.23 ರಂದು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ನಡ ಗ್ರಾಮದ ಕುತ್ರೊಟ್ಟು ನಿವಾಸಿ ಶ್ರೀಮತಿ ಮರಿಯಮ್ಮ ರವರು ನೀಡಿದ ದೂರಿನಂತೆ ಮರಿಯಮ್ಮ ರವರ ಪತಿ ಫಯಾಜ್ ಎ. 22 ರಂದು ಬೆಳ್ಳಿಗ್ಗೆ 6.30 ಗಂಟೆಗೆ ಮನೆಯಿಂದ ರಿಕ್ಷಾದಲ್ಲಿ ಬಾಡಿಗೆಗೆ ಎಂದು ಹೋದವರು, ಲಾಯಿಲದ ಕಕ್ಕೇನಕ್ಕೆ ಹೋಗಿ
ರಿಕ್ಷಾದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಈಗ ಇಬ್ಬರ ಮೊಬೈಲ್‌ ಸ್ವೀಚ್‌ ಆಫ್‌ ಆಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಅವರು ಬರಬಹುದು ಎಂದು ಈ ತನಕ ಕಾದು ತಡವಾಗಿ ದೂರು ನೀಡುತ್ತಿದ್ದು ಲಾಯಿಲ ಕಕ್ಕೇನದ ಮಹಿಳೆಯ ಜೊತೆ ಕಾಣೆಯಾಗಿರುವ ಫಯಾಜ್‌ ಪತ್ತೆ ಹಚ್ಚಿ ಕೊಡಬೇಕಾಗಿ ದೂರಿನಲ್ಲಿ ವಿನಂತಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಅಳದಂಗಡಿ ಅರಮನೆಗೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಭೇಟಿ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಶಷ್ಟಬ್ಧಿ ಪೂರೈಸಿದ ಸುಣ್ಣೆಂಬಳ ವಿಶೇಶ್ವರ ಭಟ್ ರಿಗೆ ಗೌರವಾರ್ಪಣೆ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ , ಮುಂಡಾಜೆಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶೇ.95.25

Suddi Udaya

ನೆರ್ತನೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪವನ್, ಕಾರ್ಯದರ್ಶಿ ಸಂದೀಪ್ ಆಯ್ಕೆ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya
error: Content is protected !!