September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

ಶಿಶಿಲ : ರಾಮ ಹನುಮ ಈ ಭೂಮಿಯಲ್ಲಿ ಚಿರಕಾಲ ಇದ್ದಾರೆ. ಎಲ್ಲಿ ಭಕ್ತಿಯಿಂದ ಭಜಿಸುವವರಿರುತ್ತಾರೊ ಅಲ್ಲಿ ರಾಮ ಹನುಮನಿರುತ್ತಾರೆ. ಭಜನೆ ಸಂಸ್ಕಾರ ಬೆಳೆಸುತ್ತದೆ. ಅಳುಕನ್ನು ದೂರ ಮಾಡುತ್ತದೆ. ನಮ್ಮ ಧರ್ಮ ನಂಬಿಕೆ ಇರುವಲ್ಲಿ ಹನುಮ ರಾಮನಿರುತ್ತಾರೆ. ನಾವು ಇರುವಲ್ಲಿಯವರೆಗೆ ಅವರೂ ಇರುತ್ತಾರೆ. ಅವರು ಇರುವಲ್ಲಿಯವರೆಗೆ ನಾವೂ ಇರುತ್ತೆವೆ. ಎಂದು ಸಾಹಿತಿ, ಬರಹಗಾರ, ನಿವೃತ್ತ ಪ್ರಾಂಶುಪಾಲರಾದ ಉಂಡೆಮನೆ ವಿಶ್ವೇಶ್ವರ ಭಟ್ ತಿಳಿಸಿದರು.


ಅವರು ಶಿಶಿಲ ಶಿವಕೀರ್ತಿ ನಿಲಯದಲ್ಲಿ‌ ನಡೆದ ” ಹನುಮ‌ ಜಯಂತಿ ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದರು.
ಕಾರ್ಯಕ್ರಮವನ್ನು ಅರಿಕೆಗುಡ್ದೆ ದೇವಾಲಯದ ಪ್ರಕಾಶ್ ಪಿಲಿಕಬೆ ಉದ್ಘಾಟನೆ ಮಾಡಿ ಹನೂಮಂತ ರಾಮಾಯಣದ ರತ್ನ, ಭಕ್ತಿಗೆ ಮತ್ತು ಆದರ್ಶಕ್ಕೆ ಹನುಮ ನಮಗೆಲ್ಲಾ ಮಾದರಿ . ಹನುಮನ ಭಜಿಸಿದವರಿಗೆ ಎಲ್ಲಾ ಪುಣ್ಯ ಕಾರ್ಯಗಳೂ ಜೀವನದಲ್ಲಿ ಲಭಿಸಲಿ ಎಂದು ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ವಿವಿಧ ಭಜನಾ ಮಂಡಳಿಯಿಂದ ಕುಣಿತ ಭಜನೆ, ಭಜನಾ ಪಟುಗಳಿಗೆ ಅಭಿನಂದನೆ, ರಾಮಾಯಣ ಹಕ್ಕಿ ನೋಟ ಪುಸ್ತಕ ವಿತರಣೆ ಮುಂತಾದ ಕಾರ್ಯಕ್ರಮ ಜರಗಿತ್ತು.
ಭಜನಾ ಕಾರ್ಯಕ್ರಮವನ್ನು ಸುಂದರ ಬಿಳಿನೆಲೆ ಮತ್ತು ತಂಡದವರು ನಿರ್ವಹಿಸಿದ್ದರು.
ಕಾರ್ಯಕ್ರಮದಲ್ಲಿ ರಾಘವೇಂದ್ರ ಕಿಗ್ಗ, ಉದಯಶಂಕರ ಅರಸಿನಮಕ್ಕಿ, ಪುತ್ತೂರು ರವೀಂದ್ರ ಕುದ್ದಣ್ನಾಯ, ಭಾಸ್ಕರ ರಾವ್ ಮುಂಡ್ರುಪ್ಪಾಡಿ , ರವಿ ಕಾಸರಗೋಡು, ವಿಶು ಕುಮಾರ್ ಪೆರೆಡೆಲು, ಪ್ರೇಮಚಂದ್ರ ಪೆರ್ಲ, ಮೋಹನ ನೆಲ್ಲಿತ್ತಾಯ, ಶಿವರಾಮ ನೆಲ್ಲಿತ್ತಾಯ, ಶ್ರೀಪತಿ ಶಿಶಿಲ, ಪ್ರಕಾಶ ನೆಲ್ಲಿತ್ತಾಯ ಮುಂತಾದವರು ಭಾಗವಹಿಸಿದ್ದರು.

Related posts

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಮನೆಮನೆ ಸಂಪರ್ಕದ ಪ್ರಯುಕ್ತ ಶ್ರೀರಾಮ ಕ್ಷೇತ್ರದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ

Suddi Udaya

ಹೊಸಮಜಲುವಿನಲ್ಲಿ ಎಸ್‌ಜೆಎಮ್ ರೇಂಜ್ ಕಾನ್ಫರೆನ್ಸ್ ಸಂಪನ್ನ

Suddi Udaya

ಮುಂಡಾಜೆ: ಯಂಗ್ ಚಾಲೆಂಜರ್ಸ್ ನಲ್ಲಿ ಅಣಬೆ ತರಬೇತಿ ಕಾರ್ಯಾಗಾರ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚತಾ ಆಂದೋಲನ

Suddi Udaya
error: Content is protected !!