37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

ಉರುವಾಲು: ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವದ ನೇಮೋತ್ಸವವು ಎ.24ರಿಂದ ಪ್ರಾರಂಭಗೊಂಡು 25ರವರೆಗೆ ನಡೆಯಲಿದೆ.

ಇಂದು ಬೆಳಗ್ಗೆ ಪ್ರಾರ್ಥನೆ, ತೋರಣಮೂಹೂರ್ತ, ಸ್ವಸ್ತಿ ಪುಣ್ಯಾಹ, ಗಣಯಾಗ, ಪಂಚಾಮೃತ ಅಭಿಷೇಕ, ಏಕಾದಶ ರುದ್ರಪಾರಾಯಣ ಸಹಿತ ಅಭಿಷೇಕ, ನವಕ ಕಲಶಾಭಿಷೇಕ ಪ್ರಧಾನ ಹೋಮ, ಮಹಾಪೂಜೆ, ಪ್ರಸಾದ ವಿತರಣೆ, ಹಾಗೂ ದೇವಸ್ಥಾನದ ಬಳಿ ಹೊರೆಕಾಣಿಕೆ ಸ್ವೀಕಾರ, ಅನ್ನಸಂತರ್ಪಣೆ ನಡೆಯಿತು.

ಸೂರ್ಯೋದಯದಿಂದ ಸೂರ್ಯಾಸ್ತದ ತನಕ ಅರ್ಧ ಏಕಾಹಃ ಭಜನಾ ಕಾರ್ಯಕ್ರಮ ನಡೆಯಲಿದ್ದು ಇದರ ಉದ್ಘಾಟನೆಯನ್ನು ಮಾರುತಿಪುರ ರೈತ ಬಂಧು ಮಾಲಕರು ಶಿವಶಂಕರ ನಾಯಕ್ ನೆರವೇರಿಸಿದರು.. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ರಾತ್ರಿ ಗಂಟೆ 6-00 ರಿಂದ ಶ್ರೀ ರಂಗಪೂಜೆ, ಪ್ರಾರ್ಥನೆ, ದೈವಕ್ಕೆ ಪರ್ವ ಸೇವೆ, ರಾತ್ರಿ 8-00 ರಿಂದ ದೇವರ ಬಲಿ ಉತ್ಸವ, ಕಟ್ಟೆಪೂಜೆ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ., ಅನ್ನಸಂತರ್ಪಣೆ, ರಾತ್ರಿ ಗಂಟೆ 10-00ಕ್ಕೆ ಶ್ರೀ ವ್ಯಾಘ್ರಚಾಮುಂಡಿ ದೈವದ ನೇಮೋತ್ಸವ ನಡೆಯಲಿದೆ.

Related posts

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೆಲ್ಕೋ ಇಂಡಿಯಾ ಫೌಂಡೇಶನ್ ವತಿಯಿಂದ ಸೌರ ವಿದ್ಯುತ್ ಘಟಕ ಹಸ್ತಾಂತರ

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

Suddi Udaya

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya
error: Content is protected !!