24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

ಉರುವಾಲು: ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವದ ನೇಮೋತ್ಸವವು ಎ.24ರಿಂದ ಪ್ರಾರಂಭಗೊಂಡು 25ರವರೆಗೆ ನಡೆಯಲಿದೆ.

ಇಂದು ಬೆಳಗ್ಗೆ ಪ್ರಾರ್ಥನೆ, ತೋರಣಮೂಹೂರ್ತ, ಸ್ವಸ್ತಿ ಪುಣ್ಯಾಹ, ಗಣಯಾಗ, ಪಂಚಾಮೃತ ಅಭಿಷೇಕ, ಏಕಾದಶ ರುದ್ರಪಾರಾಯಣ ಸಹಿತ ಅಭಿಷೇಕ, ನವಕ ಕಲಶಾಭಿಷೇಕ ಪ್ರಧಾನ ಹೋಮ, ಮಹಾಪೂಜೆ, ಪ್ರಸಾದ ವಿತರಣೆ, ಹಾಗೂ ದೇವಸ್ಥಾನದ ಬಳಿ ಹೊರೆಕಾಣಿಕೆ ಸ್ವೀಕಾರ, ಅನ್ನಸಂತರ್ಪಣೆ ನಡೆಯಿತು.

ಸೂರ್ಯೋದಯದಿಂದ ಸೂರ್ಯಾಸ್ತದ ತನಕ ಅರ್ಧ ಏಕಾಹಃ ಭಜನಾ ಕಾರ್ಯಕ್ರಮ ನಡೆಯಲಿದ್ದು ಇದರ ಉದ್ಘಾಟನೆಯನ್ನು ಮಾರುತಿಪುರ ರೈತ ಬಂಧು ಮಾಲಕರು ಶಿವಶಂಕರ ನಾಯಕ್ ನೆರವೇರಿಸಿದರು.. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ರಾತ್ರಿ ಗಂಟೆ 6-00 ರಿಂದ ಶ್ರೀ ರಂಗಪೂಜೆ, ಪ್ರಾರ್ಥನೆ, ದೈವಕ್ಕೆ ಪರ್ವ ಸೇವೆ, ರಾತ್ರಿ 8-00 ರಿಂದ ದೇವರ ಬಲಿ ಉತ್ಸವ, ಕಟ್ಟೆಪೂಜೆ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ., ಅನ್ನಸಂತರ್ಪಣೆ, ರಾತ್ರಿ ಗಂಟೆ 10-00ಕ್ಕೆ ಶ್ರೀ ವ್ಯಾಘ್ರಚಾಮುಂಡಿ ದೈವದ ನೇಮೋತ್ಸವ ನಡೆಯಲಿದೆ.

Related posts

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

Suddi Udaya

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

Suddi Udaya

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಚುನಾವಣೆ ಮತ್ತು ಅಪರಾಧದ ತಡೆ ಬಗ್ಗೆ ಮಾಹಿತಿ

Suddi Udaya

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya
error: Content is protected !!