22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

ನಡ ಗ್ರಾಮದ ಕುತ್ರೊಟ್ಟು ನಿವಾಸಿ ಫಯಾಜ್ , ಲಾಯಿಲ ಕಕ್ಕೇನದ ಮಹಿಳೆಯೊಂದಿಗೆ ನಾಪತ್ತೆಯಾಗಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿ, ಫಯಾಜ್ ನ ಪತ್ನಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಎ.23 ರಂದು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ನಡ ಗ್ರಾಮದ ಕುತ್ರೊಟ್ಟು ನಿವಾಸಿ ಶ್ರೀಮತಿ ಮರಿಯಮ್ಮ ರವರು ನೀಡಿದ ದೂರಿನಂತೆ ಮರಿಯಮ್ಮ ರವರ ಪತಿ ಫಯಾಜ್ ಎ. 22 ರಂದು ಬೆಳ್ಳಿಗ್ಗೆ 6.30 ಗಂಟೆಗೆ ಮನೆಯಿಂದ ರಿಕ್ಷಾದಲ್ಲಿ ಬಾಡಿಗೆಗೆ ಎಂದು ಹೋದವರು, ಲಾಯಿಲದ ಕಕ್ಕೇನಕ್ಕೆ ಹೋಗಿ
ರಿಕ್ಷಾದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. ಈಗ ಇಬ್ಬರ ಮೊಬೈಲ್‌ ಸ್ವೀಚ್‌ ಆಫ್‌ ಆಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಅವರು ಬರಬಹುದು ಎಂದು ಈ ತನಕ ಕಾದು ತಡವಾಗಿ ದೂರು ನೀಡುತ್ತಿದ್ದು ಲಾಯಿಲ ಕಕ್ಕೇನದ ಮಹಿಳೆಯ ಜೊತೆ ಕಾಣೆಯಾಗಿರುವ ಫಯಾಜ್‌ ಪತ್ತೆ ಹಚ್ಚಿ ಕೊಡಬೇಕಾಗಿ ದೂರಿನಲ್ಲಿ ವಿನಂತಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ ತಾ.ಪಂ. ನಲ್ಲಿ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ

Suddi Udaya

ಬೆಳ್ತಂಗಡಿ ಹಿಂದುಳಿದ ವರ್ಗ ಮೋರ್ಚಾದ ವತಿಯಿಂದ ಫಂಡಿಜೆವಾಳ್ಯ ಶಾಲೆಯಲ್ಲಿ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ

Suddi Udaya

ಅರಣ್ಯ ಇಲಾಖೆ ಬುಡಕಟ್ಟು ಸಮುದಾಯದ ಜೊತೆಗೆ ಸರ್ಕಾರವನ್ನು ಕೂಡ ವಂಚಿಸುತ್ತಿದೆ : ಹರೀಶ್ ಎಳನೀರ್

Suddi Udaya

ಉಜಿರೆ: ಶ್ರೀ ಧ.ಮ. ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನ್ಯೂ ಬೈನರಿ ಅಕ್ರಿಡಿಟೇಶನ್ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ (NEP) ಕುರಿತು ಉಪನ್ಯಾಸ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯಿಂದ ಉದ್ಯಮದೊಂದಿಗೆ ಸಮಾಜಮುಖಿ ಸೇವೆ:

Suddi Udaya

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!